Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದವರು ತಿರುಪತಿಗೆ ಹೋಗಿದ್ದಾಗ ಸೆಕ್ಯುರಿಟಿಯಿಂದಲೇ ಮನೆಗಳ್ಳತನ.. Liveನಲ್ಲಿ ಕೃತ್ಯ ನೋಡಿದ ಮನೆ ಮಾಲೀಕ!

ದೀಪಕ್ ಮತ್ತು ಕುಟುಂಬ ತಿರುಪತಿಗೆ ಹೋಗಿದ್ದ ಸಮಯ ನೋಡಿ ಸೆಕ್ಯುರಿಟಿ ತನ್ನ ಮಿತ್ರರೊಡನೆ ಕಳ್ಳತನ ಮಾಡಿದ್ದಾನೆ. ಬರೋಬ್ಬರಿ 46 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಟುಂಬದವರು ತಿರುಪತಿಗೆ ಹೋಗಿದ್ದಾಗ ಸೆಕ್ಯುರಿಟಿಯಿಂದಲೇ ಮನೆಗಳ್ಳತನ.. Liveನಲ್ಲಿ ಕೃತ್ಯ ನೋಡಿದ ಮನೆ ಮಾಲೀಕ!
ಮನೆಯಲ್ಲಿ ಕಳ್ಳತನ ಎಸಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Jan 05, 2021 | 11:41 AM

ಬೆಂಗಳೂರು: ನಗರದ ಕೆ.ಜಿ. ಹಳ್ಳಿಯ ಅಪಾರ್ಟ್​ಮೆಂಟ್​ವೊಂದರಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತ ಮನೆಯ ಮಾಲೀಕ ದೀಪಕ್ ಎಂಬುವವರ ಮನೆಯಲ್ಲಿ ಕಳ್ಳತನ ಎಸಗಿದ್ದಾನೆ. ದೀಪಕ್ ಮತ್ತು ಕುಟುಂಬ ತಿರುಪತಿಗೆ ಹೋಗಿದ್ದ ಸಮಯ ನೋಡಿ ಸೆಕ್ಯುರಿಟಿಯವ ತನ್ನ ಮಿತ್ರರೊಡನೆ ಸೇರಿಕೊಂಡು ಕಳ್ಳತನ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ದೀಪಕ್ ಕುಟುಂಬ ಸಮೇತರಾಗಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜ. 1ರಂದು ತಿರುಪತಿಗೆ ತೆರಳಿದ್ದರು. ಮನೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವಂತೆ ಸೆಕ್ಯುರಿಟಿ ಸಂಜಯ್​ಗೆ ತಿಳಿಸಿದ್ದರು. ಈ ಸಮಯದಲ್ಲಿ ಸಂಜಯ್ ತನ್ನ ಮಿತ್ರರೊಡನೆ ಸುಮಾರು ₹49 ಲಕ್ಷ  ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾನೆ.

ತಂತ್ರಜ್ಞಾನದ ಪ್ರಯೋಜನ ಪಡೆದ ಮನೆ ಮಾಲೀಕ ಮಾಲೀಕ ದೀಪಕ್ ತಮ್ಮ ಮನೆಗೆ ಸಿಸಿ ಕ್ಯಾಮರಾ ಅಳವಡಿಸಿದ್ದರು. ಕ್ಯಾಮರಾವನ್ನು ಮೊಬೈಲ್​ಗೆ ಲಿಂಕ್ ಮಾಡಲಾಗಿತ್ತು. ಹೀಗಾಗಿ ಮಾಲೀಕ ದೀಪಕ್ ಅವರು ತನ್ನ ಮನೆಯಲ್ಲಿ ನಡೆಯುತ್ತಿರುವ  ಕಳ್ಳತನವನ್ನು  ಲೈವ್​ನಲ್ಲಿ ನೋಡಿ, ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ.

ಕಳ್ಳತನ ಮಾಡುತ್ತಿರುವ ದೃಶ್ಯ ನೋಡುತ್ತಿದ್ದ ದೀಪಕ್ ತಕ್ಷಣ ವಿಜಯನಗರದಲ್ಲಿ ವಾಸವಾಗಿರುವ ತನ್ನ ತಂದೆಯವರಿಗೆ ವಿಷಯ ತಿಳಿಸಿದ್ದಾರೆ. ತಂದೆ ಮನೆಗೆ ಬರುವಷ್ಟರಲ್ಲಿ ಸೆಕ್ಯುರಿಟಿ ಪರಾರಿಯಾಗಿದ್ದಾನೆ. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಶೋಧ ಕಾರ್ಯ ನಡೆಯುತ್ತಿದೆ.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ