AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದವರು ತಿರುಪತಿಗೆ ಹೋಗಿದ್ದಾಗ ಸೆಕ್ಯುರಿಟಿಯಿಂದಲೇ ಮನೆಗಳ್ಳತನ.. Liveನಲ್ಲಿ ಕೃತ್ಯ ನೋಡಿದ ಮನೆ ಮಾಲೀಕ!

ದೀಪಕ್ ಮತ್ತು ಕುಟುಂಬ ತಿರುಪತಿಗೆ ಹೋಗಿದ್ದ ಸಮಯ ನೋಡಿ ಸೆಕ್ಯುರಿಟಿ ತನ್ನ ಮಿತ್ರರೊಡನೆ ಕಳ್ಳತನ ಮಾಡಿದ್ದಾನೆ. ಬರೋಬ್ಬರಿ 46 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಟುಂಬದವರು ತಿರುಪತಿಗೆ ಹೋಗಿದ್ದಾಗ ಸೆಕ್ಯುರಿಟಿಯಿಂದಲೇ ಮನೆಗಳ್ಳತನ.. Liveನಲ್ಲಿ ಕೃತ್ಯ ನೋಡಿದ ಮನೆ ಮಾಲೀಕ!
ಮನೆಯಲ್ಲಿ ಕಳ್ಳತನ ಎಸಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆ
shruti hegde
| Edited By: |

Updated on: Jan 05, 2021 | 11:41 AM

Share

ಬೆಂಗಳೂರು: ನಗರದ ಕೆ.ಜಿ. ಹಳ್ಳಿಯ ಅಪಾರ್ಟ್​ಮೆಂಟ್​ವೊಂದರಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತ ಮನೆಯ ಮಾಲೀಕ ದೀಪಕ್ ಎಂಬುವವರ ಮನೆಯಲ್ಲಿ ಕಳ್ಳತನ ಎಸಗಿದ್ದಾನೆ. ದೀಪಕ್ ಮತ್ತು ಕುಟುಂಬ ತಿರುಪತಿಗೆ ಹೋಗಿದ್ದ ಸಮಯ ನೋಡಿ ಸೆಕ್ಯುರಿಟಿಯವ ತನ್ನ ಮಿತ್ರರೊಡನೆ ಸೇರಿಕೊಂಡು ಕಳ್ಳತನ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ದೀಪಕ್ ಕುಟುಂಬ ಸಮೇತರಾಗಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜ. 1ರಂದು ತಿರುಪತಿಗೆ ತೆರಳಿದ್ದರು. ಮನೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವಂತೆ ಸೆಕ್ಯುರಿಟಿ ಸಂಜಯ್​ಗೆ ತಿಳಿಸಿದ್ದರು. ಈ ಸಮಯದಲ್ಲಿ ಸಂಜಯ್ ತನ್ನ ಮಿತ್ರರೊಡನೆ ಸುಮಾರು ₹49 ಲಕ್ಷ  ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾನೆ.

ತಂತ್ರಜ್ಞಾನದ ಪ್ರಯೋಜನ ಪಡೆದ ಮನೆ ಮಾಲೀಕ ಮಾಲೀಕ ದೀಪಕ್ ತಮ್ಮ ಮನೆಗೆ ಸಿಸಿ ಕ್ಯಾಮರಾ ಅಳವಡಿಸಿದ್ದರು. ಕ್ಯಾಮರಾವನ್ನು ಮೊಬೈಲ್​ಗೆ ಲಿಂಕ್ ಮಾಡಲಾಗಿತ್ತು. ಹೀಗಾಗಿ ಮಾಲೀಕ ದೀಪಕ್ ಅವರು ತನ್ನ ಮನೆಯಲ್ಲಿ ನಡೆಯುತ್ತಿರುವ  ಕಳ್ಳತನವನ್ನು  ಲೈವ್​ನಲ್ಲಿ ನೋಡಿ, ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ.

ಕಳ್ಳತನ ಮಾಡುತ್ತಿರುವ ದೃಶ್ಯ ನೋಡುತ್ತಿದ್ದ ದೀಪಕ್ ತಕ್ಷಣ ವಿಜಯನಗರದಲ್ಲಿ ವಾಸವಾಗಿರುವ ತನ್ನ ತಂದೆಯವರಿಗೆ ವಿಷಯ ತಿಳಿಸಿದ್ದಾರೆ. ತಂದೆ ಮನೆಗೆ ಬರುವಷ್ಟರಲ್ಲಿ ಸೆಕ್ಯುರಿಟಿ ಪರಾರಿಯಾಗಿದ್ದಾನೆ. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಶೋಧ ಕಾರ್ಯ ನಡೆಯುತ್ತಿದೆ.

ಕಳ್ಳತನ, ದರೋಡೆ ಎಸಗುತ್ತಿದ್ದ ಆರೋಪಿಗಳ ಬಂಧನ

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!