AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ […]

ಕ್ರೀಡಾ ವಿಜೇತರಿಗೆ ಇನ್ನೂ ಸಿಕ್ಕಿಲ್ಲ ಹಣ, ದಸರಾ ಉಸ್ತುವಾರಿ ಸಚಿವ ಸೋಮಣ್ಣ ಏನ್ಮಾಡಿದರು?
ವಿಧಾನ ಪರಿಷತ್: ನಾನು 3 ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ
ಸಾಧು ಶ್ರೀನಾಥ್​
|

Updated on:Jan 03, 2020 | 1:54 PM

Share

ಮೈಸೂರು: ದಸರಾ ಕ್ರೀಡಾಕೂಟದ ವಿಜೇತರಿಗೆ ಇನ್ನು ಹಣ ನೀಡದ ಅಧಿಕಾರಿಗೆ ವಸತಿ ಸಚಿವ ವಿ.ಸೋಮಣ್ಣ ವೇದಿಕೆಯಲ್ಲೇ ಬೆವರಿಳಿಸಿದ್ದಾರೆ. ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯುವಜನ ಕ್ರೀಡಾ ಇಲಾಖೆ ಉಪ ನಿರ್ದೇಶಕ ಸುರೇಶ್‌ಗೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ದಸರಾ ಕ್ರೀಡಾಕೂಟಕ್ಕೆ 7 ಕೋಟಿ ಹಣ ನೀಡಿದ್ದೇವೆ. ಆದ್ರೆ ಇವರು ಎಲ್ಲ ಹಣವನ್ನು ತಿಂದು ತೇಗಿದ್ದಾನೆ. ಮಕ್ಕಳಿಗೆ ನೀಡುವ ಹಣವನ್ನೂ ನೀಡಿಲ್ಲ. ಮೊದಲು ಅಕೌಂಟ್ ಬುಕ್ ತೆಗೆದುಕೊಂಡು ಬಾ. ಈಗಲೇ ಇವರನ್ನ ಸಸ್ಪೆಂಡ್ ಮಾಡಿ. ಇಲ್ಲಿಂದ ಜಾಗ ಖಾಲಿ ಮಾಡು. ನಾನು ಕ್ಯಾಬಿನೆಟ್‌ನಲ್ಲಿ ಅಪ್ರೂವ್​ ಮಾಡ್ತೀನಿ. ಮೊದಲು ಅವರ ರಿಪೋರ್ಟ್​ ನನಗೆ ಕಳುಹಿಸಿಕೊಡಿ ಎಂದು ಸಚಿವ ವಿ. ಸೋಮಣ್ಣ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Published On - 12:24 pm, Fri, 3 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More