AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣಹವೆಗೆ ತುಟಿಯ ಸೌಂದರ್ಯ ಕಳೆಗುಂದದಿರಲಿ; ಚಳಿಗಾಲದ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಮದ್ದು!

Lip care tips: ಚಳಿಗಾಲದಲ್ಲಿ ನಮ್ಮ ತುಟಿಯ ಕಾಳಜಿಗಾಗಿ ಏನು ಮಾಡಬಹುದು ಎಂಬ ಗೊಂದಲವಿದ್ದರೆ ಈ ಕೆಳಗಿನ ಅಂಶಗಳನ್ನು ಗಮನಿಸಿ.

ಒಣಹವೆಗೆ ತುಟಿಯ ಸೌಂದರ್ಯ ಕಳೆಗುಂದದಿರಲಿ; ಚಳಿಗಾಲದ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಮದ್ದು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 7:57 PM

Share

ಮಳೆಗಾಲ, ಚಳಿಗಾಲ, ಬೇಸಿಗೆಕಾಲ.. ಪ್ರತಿಯೊಂದು ಕಾಲವೂ ತನ್ನದೇ ಆದ ಸವಾಲುಗಳೊಂದಿಗೆ ಎದುರಾಗುತ್ತದೆ. ಆಯಾ ಕಾಲವು ಅದರದೇ ಆದ ಖುಷಿ ತಂದಂತೆ, ಸಮಸ್ಯೆಗಳನ್ನೂ ಹೊತ್ತು ತರುತ್ತವೆ. ಚುಮುಚುಮು ಚಳಿ, ತಂಪು ಗಾಳಿ, ಶೀತಲ ವಾತಾವರಣ ತುಂಬಿರುವ ಚಳಿಗಾಲವನ್ನು ನಾವೀಗ ಎದುರಿಸುತ್ತಿದ್ದೇವೆ. ಎಲ್ಲಾ ಅವಧಿಯಂತೆ ಚಳಿಗಾಲದಲ್ಲಿಯೂ ಕೆಲವಷ್ಟು ಸಮಸ್ಯೆಗಳಿರುತ್ತದೆ.

ಚಳಿಗಾಲದಲ್ಲಿ ವಾತಾವರಣದ ಗಾಳಿಯಲ್ಲಿರುವ ತೇವಾಂಶದ ಪ್ರಮಾಣ ಬಹಳಷ್ಟು ಕಡಿಮೆಯಾಗುತ್ತದೆ. ಇದರಿಂದ ನಮ್ಮ ಚರ್ಮಕ್ಕೆ ಬೇಕಾದಷ್ಟು ತೇವಾಂಶ ಸಿಗದೇ ಹೋಗಬಹುದು. ಚರ್ಮ ಸಂಬಂಧಿ ಸಮಸ್ಯೆಗಳೂ ಎದುರಾಗಬಹುದು. ಜೊತೆಗೆ, ತುಟಿಯ ರಕ್ಷಣೆಯೂ ಸವಾಲಾಗಬಹುದು. ತುಟಿ ಒರಟಾಗುವುದು, ಚರ್ಮ ಬಿರುಕಾಗುವುದು, ತುಟಿ ಒಡೆಯುವುದು, ಒಣಗುವುದು ಇತ್ಯಾದಿ. ಈ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಸೂಕ್ತ ರಕ್ಷಣೆ ಕೈಗೊಳ್ಳಬೇಕು. ನಮ್ಮ ತುಟಿಯ ಕಾಳಜಿಗಾಗಿ ಏನು ಮಾಡಬಹುದು ಎಂಬ ಗೊಂದಲವಿದ್ದರೆ ಈ ಅಂಶಗಳನ್ನು ಗಮನಿಸಿ.

ಸರಿಯಾಗಿ ನೀರು ಕುಡಿಯಿರಿ: ಚಳಿಗಾಲದಲ್ಲಿ ದೇಹದಲ್ಲಿನ ತೇವಾಂಶದ ಪ್ರಮಾಣ ಕಡಿಮೆಯಾಗುತ್ತದೆ. ಅದನ್ನು ಸರಿದೂಗಿಸುವುದಕ್ಕಾಗಿ ಸರಿಯಾಗಿ ನೀರು ಕುಡಿಯುವುದು ಅನಿವಾರ್ಯ. ತುಟಿ ಹಾಗೂ ದೇಹವನ್ನು ಆರೋಗ್ಯವಾಗಿ ಕಾಪಾಡಲು ಸೂಕ್ತ ಪ್ರಮಾಣದಲ್ಲಿ ನೀರು ಕುಡಿಯಿರಿ.

ಲಿಪ್ ಬಾಮ್ ಉಪಯೋಗಿಸಿ: ಲಿಪ್ ಬಾಮ್​ಗಳನ್ನು ಜೊತೆಗೆ ಇಟ್ಟುಕೊಳ್ಳುವುದು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿ ಅವುಗಳನ್ನು ಬಳಸಿಕೊಳ್ಳುವುದು ಒಳ್ಳೆಯದು. ತುಟಿಯ ತೇವಾಂಶವನ್ನು ಉಳಿಸಿಕೊಳ್ಳಲು ಲಿಪ್ ಬಾಮ್​ಗಳು ಬಹಳಷ್ಟು ಸಹಕಾರಿ.

ಇದನ್ನೂ ಓದಿ: ಬಂಗಾರಪೇಟೆಯ ವೆರೈಟಿ ವೆರೈಟಿ ಪಾನಿ ಪುರಿ.. ಏನಿದರ ವಿಶೇಷ? ಇಲ್ಲಿದೆ ನೋಡಿ

ತುಟಿ ಸವರಿಕೊಳ್ಳುವುದು ಒಳ್ಳೆಯದಲ್ಲ: ಹೌದು, ನಾವು ಸುಲಭವಾಗಿ ಹಾಗೂ ಬಹಳಷ್ಟು ಬಾರಿ ಹೀಗೆಯೇ ಮಾಡುತ್ತೇವೆ. ಚಳಿಯಿಂದ ಒಣಗಿರುವ ತುಟಿಗಳನ್ನು ನಾಲಗೆಯಿಂದ ಸವರಿಕೊಳ್ಳುತ್ತೇವೆ. ಇದು ಒಳ್ಳೆಯದಲ್ಲ. ಹೀಗೆ ಮಾಡುವುದರಿಂದ ತುಟಿಗಳು ಮತ್ತೆ ಮತ್ತೆ ಒಣಗುತ್ತವೆ. ಹಾಗಾಗಿ, ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದೇ ಒಳ್ಳೆಯದು.

ಮನೆಮದ್ದು ಬಳಸಿ: ಚಳಿಗಾಲದಲ್ಲಿ ತುಟಿಗಳ, ದೇಹದ ಆರೋಗ್ಯ ಕಾಪಾಡಿಕೊಳ್ಳಲು ದ್ವಿದಳ ಧಾನ್ಯಗಳನ್ನು ಸೇವಿಸುವುದು ಉತ್ತಮ. ಹೆಸರುಕಾಳು, ತೊಗರಿ, ಕಡಲೆ, ಅವರೆ ಮುಂತಾದ ಕಾಳು ಪದಾರ್ಥಗಳನ್ನು ಆಹಾರದಲ್ಲಿ ಬಳಸಿಕೊಳ್ಳಿ. ಅಲೋವೀರಾ ಮತ್ತು ಜೇನು ಕೂಡ ತುಟಿಗಳಲ್ಲಿ ತೇವಾಂಶ ಕಾಪಾಡಲು ಸಹಕರಿಸುತ್ತವೆ.

ತುಟಿ ಚರ್ಮವನ್ನು ಕಚ್ಚಬೇಡಿ: ಹಲವರು ಈ ಅಭ್ಯಾಸ ಹೊಂದಿರುತ್ತಾರೆ. ತುಟಿಗಳನ್ನು ಕಚ್ಚುವುದು, ಒಡೆದ ಚರ್ಮ ಕೀಳುವುದು ಇತ್ಯಾದಿ. ಈ ಅಭ್ಯಾಸ ಒಳ್ಳೆಯದಲ್ಲ. ಇದರಿಂದ ತುಟಿಗೆ ಹೆಚ್ಚಿನ ಹಾನಿ ಉಂಟಾಗಬಹುದು. ಜೊತೆಗೆ, ಹೆಚ್ಚು ಚರ್ಮ ಕಿತ್ತರೆ ರಕ್ತಸ್ರಾವವೂ ಉಂಟಾಗಬಹುದು.

ಚರ್ಮ ಒಣಗುವ, ತೇವಾಂಶ ಕಳೆದುಕೊಳ್ಳುವ ಸಮಸ್ಯೆ ಎಷ್ಟು ದೊಡ್ಡದಾಗಿ ಕಂಡರೂ ಸುಲಭ ಉಪಾಯಗಳಿಂದ ಅವುಗಳನ್ನು ಇಲ್ಲವಾಗಿಸಬಹುದು. ಹೆಚ್ಚು ಹಣ ವ್ಯಯಿಸದೆ, ಸುಲಭವಾಗಿ, ಮನೆಯಲ್ಲಿ ಲಭ್ಯವಿರುವ ವಸ್ತುಗಳಿಂದಲೇ ತುಟಿಯ ಆರೋಗ್ಯ ಕಾಪಾಡಿಕೊಳ್ಳಬಹುದು. ಮಿತವಾಗಿ ನೀರು ಸ್ವೀಕರಿಸುವುದು ಎಲ್ಲಕ್ಕಿಂತ ಮುಖ್ಯ. ದೇಹವನ್ನು ತೇವಾಂಶಭರಿತವಾಗಿಡಲು ನಿಗದಿತ ಪ್ರಮಾಣದಲ್ಲಿ ನೀರು ಕುಡಿಯಬೇಕು.

ಇದನ್ನೂ ಓದಿ: ಕೆಲವರು ಎಷ್ಟೇ ಬುದ್ಧಿವಂತರಾದರೂ.. ಜೀವನದಲ್ಲಿ ಸಕ್ಸಸ್ ಕಾಣಲ್ಲ, ಯಾಕೆ?

Published On - 10:04 pm, Tue, 16 February 21

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು