AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

ಹೃತಿಕ್​ ಹಾಗೂ ಟೈಗರ್​ ಶ್ರಾಫ್​ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್​ಗಳಿಂದ ಈ ಚಿತ್ರಕ್ಕೆ ವಿಮರ್ಷಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?
ಹೃತೀಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 4:25 PM

Share

ವಾರ್​ ಸಿನಿಮಾ ಹಿಟ್​ ಆದ ನಂತರದಲ್ಲಿ ನಟ ಹೃತಿಕ್​ ರೋಷನ್​ ಯಾವುದೇ ಪ್ರಾಜೆಕ್ಟ್​ ಒಪ್ಪಿಕೊಂಡಿಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳಿವೆ. ಈಗ ಅವರ ಮುಂದಿನ ಚಿತ್ರದ ಬಗ್ಗೆ ಹೊಸ ವಿಚಾರವೊಂದು ಹೊರ ಬಿದ್ದಿದೆ. ಅವರ ಮುಂದಿನ ಸಿನಿಮಾದಲ್ಲಿ ದೀಪಿಕಾ ಜೊತೆ ಹೃತಿಕ್​ ರೊಮ್ಯಾನ್ಸ್​ ಮಾಡಲಿದ್ದಾರಂತೆ.

ತಂದೆ ರಾಕೇಶ್​ ರೋಷನ್​ ನಿರ್ದೇಶನದ ‘ಕ್ರಿಶ್​’ ಚಿತ್ರದಲ್ಲಿ ಹೃತಿಕ್​ ರೋಷನ್​ ನಟಿಸಿ ಯಶಸ್ಸು ಕಂಡಿದ್ದಾರೆ. ಈಗ ಈ ಸರಣಿಯ ನಾಲ್ಕನೇ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆಯಾದರೂ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ಮಧ್ಯೆ ಬಾಲಿವುಡ್​ ಅಂಗಳದಲ್ಲಿ ಹೊಸ ವಿಚಾರವೊಂದು ಹರಿದಾಡಲು ಆರಂಭಿಸಿದೆ.

ವಾರ್​ ನಿರ್ದೇಶಕ ಸಿದ್ಧಾರ್ಥ್​ ಆನಂದ್​ ಜೊತೆ ಹೃತಿಕ್​ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ಆ್ಯಕ್ಷನಿಂದ ಕೂಡಿರಲಿದ್ದು, ಚಿತ್ರಕ್ಕೆ ಫೈಟರ್​ ಎಂದು ಹೆಸರಿಡಲಾಗಿದೆ. ಇನ್ನು, ಚಿತ್ರದ ಹೀರೋಯಿನ್​ ಆಗಿ ದೀಪಿಕಾ ಪಡುಕೋಣೆ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ. ಸಿದ್ಧಾರ್ಥ್​ ಆನಂದ್​ ಸದ್ಯ, ಶಾರುಖ್​ ಖಾನ್​ ನಟನೆಯ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, 2021 ಮಧ್ಯದ ವೇಳೆಗೆ ಹೊಸ ಸಿನಿಮಾದ ಕೆಲಸ ಆರಂಭ ಆಗಲಿದೆಯಂತೆ.

ಹೃತಿಕ್​ ಹಾಗೂ ಟೈಗರ್​ ಶ್ರಾಫ್​ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್​ಗಳಿಂದ ಕೂಡಿದ್ದ ಈ ಚಿತ್ರಕ್ಕೆ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು.

ಬಾಲಿವುಡ್ ಗ್ರೀಕ್ ದೇವತೆಗೆ 47ರ ಹರೆಯ: ಭಾರತದ ಮೊದಲ ಸೂಪರ್ ಹೀರೊ ಹೃತಿಕ್ ರೋಷನ್​ಗೆ ಶುಭಾಶಯಗಳ ಮಹಾಪೂರ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ