AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?

ಹೃತಿಕ್​ ಹಾಗೂ ಟೈಗರ್​ ಶ್ರಾಫ್​ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್​ಗಳಿಂದ ಈ ಚಿತ್ರಕ್ಕೆ ವಿಮರ್ಷಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಹೃತಿಕ್​ ಜೊತೆ ರೊಮ್ಯಾನ್ಸ್​ ಮಾಡಲಿದ್ದಾರೆ ದೀಪಿಕಾ ಪಡುಕೋಣೆ: ಈ ಚಿತ್ರಕ್ಕೆ ನಿರ್ದೇಶಕರಾರು ಗೊತ್ತಾ?
ಹೃತೀಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 4:25 PM

Share

ವಾರ್​ ಸಿನಿಮಾ ಹಿಟ್​ ಆದ ನಂತರದಲ್ಲಿ ನಟ ಹೃತಿಕ್​ ರೋಷನ್​ ಯಾವುದೇ ಪ್ರಾಜೆಕ್ಟ್​ ಒಪ್ಪಿಕೊಂಡಿಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳಿವೆ. ಈಗ ಅವರ ಮುಂದಿನ ಚಿತ್ರದ ಬಗ್ಗೆ ಹೊಸ ವಿಚಾರವೊಂದು ಹೊರ ಬಿದ್ದಿದೆ. ಅವರ ಮುಂದಿನ ಸಿನಿಮಾದಲ್ಲಿ ದೀಪಿಕಾ ಜೊತೆ ಹೃತಿಕ್​ ರೊಮ್ಯಾನ್ಸ್​ ಮಾಡಲಿದ್ದಾರಂತೆ.

ತಂದೆ ರಾಕೇಶ್​ ರೋಷನ್​ ನಿರ್ದೇಶನದ ‘ಕ್ರಿಶ್​’ ಚಿತ್ರದಲ್ಲಿ ಹೃತಿಕ್​ ರೋಷನ್​ ನಟಿಸಿ ಯಶಸ್ಸು ಕಂಡಿದ್ದಾರೆ. ಈಗ ಈ ಸರಣಿಯ ನಾಲ್ಕನೇ ಸಿನಿಮಾ ಬರಲಿದೆ ಎಂದು ಹೇಳಲಾಗುತ್ತಿದೆಯಾದರೂ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ಮಧ್ಯೆ ಬಾಲಿವುಡ್​ ಅಂಗಳದಲ್ಲಿ ಹೊಸ ವಿಚಾರವೊಂದು ಹರಿದಾಡಲು ಆರಂಭಿಸಿದೆ.

ವಾರ್​ ನಿರ್ದೇಶಕ ಸಿದ್ಧಾರ್ಥ್​ ಆನಂದ್​ ಜೊತೆ ಹೃತಿಕ್​ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ಆ್ಯಕ್ಷನಿಂದ ಕೂಡಿರಲಿದ್ದು, ಚಿತ್ರಕ್ಕೆ ಫೈಟರ್​ ಎಂದು ಹೆಸರಿಡಲಾಗಿದೆ. ಇನ್ನು, ಚಿತ್ರದ ಹೀರೋಯಿನ್​ ಆಗಿ ದೀಪಿಕಾ ಪಡುಕೋಣೆ ಬಣ್ಣ ಹಚ್ಚಲಿದ್ದಾರೆ ಎನ್ನಲಾಗಿದೆ. ಸಿದ್ಧಾರ್ಥ್​ ಆನಂದ್​ ಸದ್ಯ, ಶಾರುಖ್​ ಖಾನ್​ ನಟನೆಯ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ, 2021 ಮಧ್ಯದ ವೇಳೆಗೆ ಹೊಸ ಸಿನಿಮಾದ ಕೆಲಸ ಆರಂಭ ಆಗಲಿದೆಯಂತೆ.

ಹೃತಿಕ್​ ಹಾಗೂ ಟೈಗರ್​ ಶ್ರಾಫ್​ ಒಟ್ಟಾಗಿ ಕಾಣಿಸಿಕೊಂಡಿದ್ದ ವಾರ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿತ್ತು. ಸಾಕಷ್ಟು ಆ್ಯಕ್ಷನ್​ಗಳಿಂದ ಕೂಡಿದ್ದ ಈ ಚಿತ್ರಕ್ಕೆ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು.

ಬಾಲಿವುಡ್ ಗ್ರೀಕ್ ದೇವತೆಗೆ 47ರ ಹರೆಯ: ಭಾರತದ ಮೊದಲ ಸೂಪರ್ ಹೀರೊ ಹೃತಿಕ್ ರೋಷನ್​ಗೆ ಶುಭಾಶಯಗಳ ಮಹಾಪೂರ

Follow Us
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?