AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಬಾಡಿಗೆ ಪಡೆದು ಈರುಳ್ಳಿ, ಮೆಣಸಿನಕಾಯಿ ಬೆಳೆದ; ಮಧ್ಯೆ ಇದನ್ನೂ ಬೆಳೆದುಬಿಟ್ಟ!

ಅಪ್ಪಟ ರೈತನಂತೆ ಪೋಸ್​ ಕೊಟ್ಟು, ಜಮೀನು ಬಾಡಿಗೆ ಪಡೆದು ಈರುಳ್ಳಿ, ಮೆಣಸಿನಕಾಯಿ ಬೆಳೆದಿದ್ದ; ಆದ್ರೆ ಏನು ದುರ್ಬುದ್ಧಿ ಇತ್ತೋ ಅವನಲ್ಲಿ.. ಬಂಗಾರದಂತ ಆ ಬೆಳೆಗಳ ಮಧ್ಯೆ, ವಿಷಕಾರಿ ಗಾಂಜಾ ಬೆಳೆಯನ್ನು ಬೆಳೆದುಬಿಟ್ಟ ಆ ಖದೀಮ! ಹೌದು, ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದ‌ ಬಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆಯಾಗಿದ್ದು, ರೈತನೊಬ್ಬನಿಗೆ ಅತಿಯಾಸೆ ಗತಿಕೇಡು ಎಂಬಂತಾಗಿದೆ. ಇದೀಗ ಹುಬ್ಬಳ್ಳಿ‌ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, 18 ಕೆ.ಜಿ. ಹಸಿ ಗಾಂಜಾ ಗಿಡಗಗಳು ವಶಕ್ಕೆ ಪಡೆದಿದ್ದಾರೆ. ದುರ್ಬುದ್ಧಿತ ಯುವರೈತ […]

ಜಮೀನು ಬಾಡಿಗೆ ಪಡೆದು ಈರುಳ್ಳಿ, ಮೆಣಸಿನಕಾಯಿ ಬೆಳೆದ; ಮಧ್ಯೆ ಇದನ್ನೂ ಬೆಳೆದುಬಿಟ್ಟ!
ಸಾಧು ಶ್ರೀನಾಥ್​
|

Updated on: Sep 15, 2020 | 2:34 PM

Share

ಅಪ್ಪಟ ರೈತನಂತೆ ಪೋಸ್​ ಕೊಟ್ಟು, ಜಮೀನು ಬಾಡಿಗೆ ಪಡೆದು ಈರುಳ್ಳಿ, ಮೆಣಸಿನಕಾಯಿ ಬೆಳೆದಿದ್ದ; ಆದ್ರೆ ಏನು ದುರ್ಬುದ್ಧಿ ಇತ್ತೋ ಅವನಲ್ಲಿ.. ಬಂಗಾರದಂತ ಆ ಬೆಳೆಗಳ ಮಧ್ಯೆ, ವಿಷಕಾರಿ ಗಾಂಜಾ ಬೆಳೆಯನ್ನು ಬೆಳೆದುಬಿಟ್ಟ ಆ ಖದೀಮ!

ಹೌದು, ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದ‌ ಬಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆಯಾಗಿದ್ದು, ರೈತನೊಬ್ಬನಿಗೆ ಅತಿಯಾಸೆ ಗತಿಕೇಡು ಎಂಬಂತಾಗಿದೆ. ಇದೀಗ ಹುಬ್ಬಳ್ಳಿ‌ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, 18 ಕೆ.ಜಿ. ಹಸಿ ಗಾಂಜಾ ಗಿಡಗಗಳು ವಶಕ್ಕೆ ಪಡೆದಿದ್ದಾರೆ. ದುರ್ಬುದ್ಧಿತ ಯುವರೈತ ಚಂದ್ರು ಕಾಶಿನಾಥ ಬನ್ನಿಕೊಪ್ಪ (30) ಎಂಬಾತನನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ ಜಮೀನು ಬಾಡಿಗೆ ಪಡೆದುಕೊಂಡಿದ್ದ ಕಾಶಿನಾಥ ಬನ್ನಿಕೊಪ್ಪ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗಳನ್ನು ಬೆಳೆದಿದ್ದ. ಅದ್ರೆ ಪಾಪಿ ಕಾಶಿನಾಥ ಬನ್ನಿಕೊಪ್ಪ‌ ಅವುಗಳ ಮಧ್ಯದಲ್ಲಿ ಅಲ್ಲಲ್ಲಿ ಗಾಂಜಾ ಸಸಿಗಳನ್ನೂ ಬೆಳೆಸಿಬಿಟ್ಟಿದ್ದ! ಅದರಿಂದಲೇ ಈಗ ಪೊಲೀಸರಿಗೆ ತಗಲಾಕೊಂಡಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ರವಿ ನಾಯಕ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರಮೇಶ ಗೋಕಾಕ ಹಾಗೂ ತಂಡ ದಾಳಿ ನಡೆಸಿ, ಗಾಂಜಾ ಸಸಿ ಜೊತೆಗೆ ಗಾಂಜಾಲಿ ಮಾಡಿರುವ ಕಾಶಿನಾಥ ಬನ್ನಿಕೊಪ್ಪನನ್ನೂ ಅಲ್ಲಿಂದ ಎಬ್ಬಿಸಿ ಕರೆದುಕೊಂಡುಬಂದಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡು, ಆರೋಪಿ ಕಾಶಿನಾಥ ಬನ್ನಿಕೊಪ್ಪನನ್ನು ನ್ಯಾಯಾಂಗ ಬಂಧನಕ್ಕೆ ಬಿಟ್ಟು ಬಂದಿದ್ದಾರೆ.

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ