AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ […]

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!
ಆಯೇಷಾ ಬಾನು
|

Updated on:Jun 05, 2020 | 3:13 PM

Share

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದದ ಪ್ಲಾಟ್‌ ಫಾರ್ಮ್ ಇದೆ. ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ. ಇದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ. ಹುಬ್ಬಳ್ಳಿ, ಬೆಂಗಳೂರು ಜೋಡಿ ರೈಲು ಮಾರ್ಗ ಕಾರ್ಯ ಹಿನ್ನೆಲೆಯಲ್ಲಿ ಅದು ಪೂರ್ಣಗೊಳಿಸುವ ಜೊತೆಗೆ ಹುಬ್ಬಳ್ಳಿ ನಿಲ್ದಾಣದಲ್ಲಿ ಒಟ್ಟು ಪ್ಲಾಟ್‌ಫಾರ್ಮ್‌ಗಳ ಸಂಖ್ಯೆಯನ್ನು 5ರಿಂದ 8ಕ್ಕೆ ಹೆಚ್ಚಿಸಲಾಗುತ್ತಿದೆ.

ಗದಗ ರಸ್ತೆಯಲ್ಲಿ ಹೊಸದಾಗಿ ಇನ್ನೊಂದು ಪ್ರವೇಶ ದ್ವಾರ ನಿರ್ಮಾಣವಾಗುತ್ತಿದೆ. ಪ್ಲಾಟ್ ಫಾರ್ಮ್ ನಿರ್ಮಾಣ, ಸಿಗ್ನಲ್, ವಿದ್ಯುತ್ ಸೇರಿದಂತೆ ಈ ಯೋಜನೆಗೆ ಒಟ್ಟು ₹90 ಕೋಟಿ ವೆಚ್ಚವಾಗಲಿದೆ. ಈ ರೀತಿ ಉದ್ದನೆಯ ರೈಲು ನಿಲ್ದಾಣದಿಂದ ವಾಣಿಜ್ಯ ನಗರಿಗೆ ಮತ್ತೊಂದು ಗರಿ ಬಂದಂತಾಗಿದೆ.

Published On - 8:32 am, Fri, 5 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್