AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ […]

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!
Follow us
ಆಯೇಷಾ ಬಾನು
|

Updated on:Jun 05, 2020 | 3:13 PM

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದದ ಪ್ಲಾಟ್‌ ಫಾರ್ಮ್ ಇದೆ. ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ. ಇದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ. ಹುಬ್ಬಳ್ಳಿ, ಬೆಂಗಳೂರು ಜೋಡಿ ರೈಲು ಮಾರ್ಗ ಕಾರ್ಯ ಹಿನ್ನೆಲೆಯಲ್ಲಿ ಅದು ಪೂರ್ಣಗೊಳಿಸುವ ಜೊತೆಗೆ ಹುಬ್ಬಳ್ಳಿ ನಿಲ್ದಾಣದಲ್ಲಿ ಒಟ್ಟು ಪ್ಲಾಟ್‌ಫಾರ್ಮ್‌ಗಳ ಸಂಖ್ಯೆಯನ್ನು 5ರಿಂದ 8ಕ್ಕೆ ಹೆಚ್ಚಿಸಲಾಗುತ್ತಿದೆ.

ಗದಗ ರಸ್ತೆಯಲ್ಲಿ ಹೊಸದಾಗಿ ಇನ್ನೊಂದು ಪ್ರವೇಶ ದ್ವಾರ ನಿರ್ಮಾಣವಾಗುತ್ತಿದೆ. ಪ್ಲಾಟ್ ಫಾರ್ಮ್ ನಿರ್ಮಾಣ, ಸಿಗ್ನಲ್, ವಿದ್ಯುತ್ ಸೇರಿದಂತೆ ಈ ಯೋಜನೆಗೆ ಒಟ್ಟು ₹90 ಕೋಟಿ ವೆಚ್ಚವಾಗಲಿದೆ. ಈ ರೀತಿ ಉದ್ದನೆಯ ರೈಲು ನಿಲ್ದಾಣದಿಂದ ವಾಣಿಜ್ಯ ನಗರಿಗೆ ಮತ್ತೊಂದು ಗರಿ ಬಂದಂತಾಗಿದೆ.

Published On - 8:32 am, Fri, 5 June 20

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್