AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ […]

ಸದ್ಯದಲ್ಲೇ ಹುಬ್ಬಳ್ಳಿಯಲ್ಲಿ.. ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರ್ಮ್!
ಆಯೇಷಾ ಬಾನು
|

Updated on:Jun 05, 2020 | 3:13 PM

Share

ಹುಬ್ಬಳ್ಳಿ: ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಭಾಜನವಾಗಲಿದೆ ವಾಣಿಜ್ಯ ನಗರಿ ರೈಲು ನಿಲ್ದಾಣ. ಅವಳಿ ನಗರ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಪ್ಲಾಟ್ ಫಾರ್ಮ್ ನಂ1 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‌ಗೆ ಹೆಚ್ಚಿಸಲಾಗುತ್ತಿದೆ. ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀಟರ್ ಉದ್ದದ ಪ್ಲಾಟ್‌ ಫಾರ್ಮ್ ಇದೆ. ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ. ಇದನ್ನೂ ಮೀರಿಸುವ ಉದ್ದನೆಯ ಪ್ಲಾಟ್‌ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ. ಹುಬ್ಬಳ್ಳಿ, ಬೆಂಗಳೂರು ಜೋಡಿ ರೈಲು ಮಾರ್ಗ ಕಾರ್ಯ ಹಿನ್ನೆಲೆಯಲ್ಲಿ ಅದು ಪೂರ್ಣಗೊಳಿಸುವ ಜೊತೆಗೆ ಹುಬ್ಬಳ್ಳಿ ನಿಲ್ದಾಣದಲ್ಲಿ ಒಟ್ಟು ಪ್ಲಾಟ್‌ಫಾರ್ಮ್‌ಗಳ ಸಂಖ್ಯೆಯನ್ನು 5ರಿಂದ 8ಕ್ಕೆ ಹೆಚ್ಚಿಸಲಾಗುತ್ತಿದೆ.

ಗದಗ ರಸ್ತೆಯಲ್ಲಿ ಹೊಸದಾಗಿ ಇನ್ನೊಂದು ಪ್ರವೇಶ ದ್ವಾರ ನಿರ್ಮಾಣವಾಗುತ್ತಿದೆ. ಪ್ಲಾಟ್ ಫಾರ್ಮ್ ನಿರ್ಮಾಣ, ಸಿಗ್ನಲ್, ವಿದ್ಯುತ್ ಸೇರಿದಂತೆ ಈ ಯೋಜನೆಗೆ ಒಟ್ಟು ₹90 ಕೋಟಿ ವೆಚ್ಚವಾಗಲಿದೆ. ಈ ರೀತಿ ಉದ್ದನೆಯ ರೈಲು ನಿಲ್ದಾಣದಿಂದ ವಾಣಿಜ್ಯ ನಗರಿಗೆ ಮತ್ತೊಂದು ಗರಿ ಬಂದಂತಾಗಿದೆ.

Published On - 8:32 am, Fri, 5 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!