AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳುಗಿದೂರಲ್ಲಿ ಜನರಿಗೆ ಮೇಲ್ಛಾವಣಿಯೇ ಆಸರೆ..

ಯಾದಗಿರಿ: ಜಿಲ್ಲೆಯಲ್ಲಿ ಭೀಮಾ ನದಿಯ ಅಬ್ಬರ ಹೆಚ್ಚಾಗಿದೆ. ನದಿ ನೀರು ಹಳ್ಳಿಗಳಿಗೆ ನುಗ್ಗಿದೆ. ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಪ್ರವಾಹಕ್ಕೆ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಮನೆಗಳು ಮುಳುಗಿದ ಕಾರಣ ಜನರು ಮನೆಗಳ ಮೇಲ್ಛಾವಣಿ ಮೇಲೆ ಆಶ್ರಯ ಪಡೆಯುತ್ತಿದ್ದಾರೆ. ಮೇಲ್ಛಾವಣಿ ಮೇಲೆ ತಾಡಪಲ್ ಹಾಕಿಕೊಂಡು ಸಂತ್ರಸ್ಥರು ದಿನಗಳನ್ನ ಕಳೆಯುತ್ತಿದ್ದಾರೆ. ಇವತ್ತು ಬೆಳಿಗ್ಗೆಯಿಂದಲೂ ಸಹ ಗ್ರಾಮಕ್ಕೆ ನದಿ ನೀರು ನುಗ್ಗುತ್ತಲೇ ಇದೆ. ನಾಯ್ಕಲ್ ಗ್ರಾಮದ 200 ಕ್ಕೂ ಅಧಿಕ ಮನೆಗಳು ಮುಳುಗಿವೆ. ನದಿಗೆ 4 ಲಕ್ಷ […]

ಮುಳುಗಿದೂರಲ್ಲಿ ಜನರಿಗೆ ಮೇಲ್ಛಾವಣಿಯೇ ಆಸರೆ..
ಆಯೇಷಾ ಬಾನು
ಆಯೇಷಾ ಬಾನು|

Updated on: Oct 20, 2020 | 11:10 AM

Share

ಯಾದಗಿರಿ: ಜಿಲ್ಲೆಯಲ್ಲಿ ಭೀಮಾ ನದಿಯ ಅಬ್ಬರ ಹೆಚ್ಚಾಗಿದೆ. ನದಿ ನೀರು ಹಳ್ಳಿಗಳಿಗೆ ನುಗ್ಗಿದೆ. ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಪ್ರವಾಹಕ್ಕೆ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಮನೆಗಳು ಮುಳುಗಿದ ಕಾರಣ ಜನರು ಮನೆಗಳ ಮೇಲ್ಛಾವಣಿ ಮೇಲೆ ಆಶ್ರಯ ಪಡೆಯುತ್ತಿದ್ದಾರೆ.

ಮೇಲ್ಛಾವಣಿ ಮೇಲೆ ತಾಡಪಲ್ ಹಾಕಿಕೊಂಡು ಸಂತ್ರಸ್ಥರು ದಿನಗಳನ್ನ ಕಳೆಯುತ್ತಿದ್ದಾರೆ. ಇವತ್ತು ಬೆಳಿಗ್ಗೆಯಿಂದಲೂ ಸಹ ಗ್ರಾಮಕ್ಕೆ ನದಿ ನೀರು ನುಗ್ಗುತ್ತಲೇ ಇದೆ. ನಾಯ್ಕಲ್ ಗ್ರಾಮದ 200 ಕ್ಕೂ ಅಧಿಕ ಮನೆಗಳು ಮುಳುಗಿವೆ. ನದಿಗೆ 4 ಲಕ್ಷ ಕ್ಯೂಸೆಕ್ ನಷ್ಟು ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿಯಿಂದ 2 ಕಿ.ಮೀ ದೂರದಲ್ಲಿರುವ ಗ್ರಾಮಗಳು, ಮನೆಯಲ್ಲಿರುವ ವಸ್ತುಗಳು ಸಂಪೂರ್ಣ ನೀರು ಪಾಲಾಗಿವೆ. ಮಕ್ಕಳು, ವೃದ್ಧರು ಮನೆ ಮೇಲ್ಚಾವಣಿ ಮೇಲೆ ಕೂತು ಆಸರೆ ಪಡೆದಿದ್ದಾರೆ.

ಕಲಬುರಗಿಯಲ್ಲೂ ಇದೇ ಪರಿಸ್ಥಿತಿ: ಇನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಡಬೂರುಗ್ರಾಮದಲ್ಲೂ ಇದೇ ರೀತಿಯ ವಾತಾವರಣವಿದೆ. ಇಲ್ಲೋ ಕೂಡ ಗ್ರಾಮದ ಜನ ಮನೆಗಳು ಮುಳುಗಿದ್ರಿಂದ ಮನೆ ಮಾಳಿಗೆ ಏರಿದ್ದಾರೆ. ವಸ್ತುಗಳು ಹಾಳಾಗಿವೆ, ತೊಡೋಕೆ ಬಟ್ಟೆ ಇಲ್ಲ. ಇಷ್ಟು ವರ್ಷ ದುಡಿದಿಟ್ಟಿದ್ದ ಯಾವ ವಸ್ತುವು ಇಲ್ಲದೆ ಎಲ್ಲವನ್ನೂ ಕಳೆದು ಕೊಂಡು ಅತಂತ್ರರಾಗಿದ್ದಾರೆ. ಪ್ರವಾಹದಿಂದಾಗಿ ನಮಗೆ ಸಾಯುವ ಸ್ಥಿತಿ ಬಂದಿದೆ. ಹೀಗಾಗಿ, ಗ್ರಾಮ ಶಿಫ್ಟ್ ಮಾಡುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!