AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಿಪ್ ಬಾಟಲಿ ಸಮೇತ ಬಸ್ ನಿಲ್ದಾಣದಲ್ಲಿ ಬಾಲಕಿ! ಆರೋಗ್ಯ ಸಚಿವರ ಪಕ್ಕದ ಊರಿನಲ್ಲೇ ಕರುಣಾಜನಕ ದೃಶ್ಯ!!!

ಚಿತ್ರದುರ್ಗ: ಇಡೀ ವಿಶ್ವವೇ ಮಾರಕ ಕೊರೊನಾ ವೈರಸ್​ಗೆ ಬಿಚ್ಚಿಬಿದ್ದಿದೆ. ಎಲ್ಲಾ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲು ವಿಶೇಷವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು  ಎದುರಾಗಿದೆ. ಇಂತಹ ಸಮಯದಲ್ಲಿ ಅಮಾಯಕ ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡದೆ, ಆಸ್ಪತ್ರೆಯಿಂದ  ಹೊರಹಾಕಿರುವ ಅಮಾನವೀಯ ಘಟನೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪಕ್ಕದ ಊರಿನಲ್ಲೇ ನಡೆದಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ತಿರುಮಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಹೊರಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಬಳ್ಳಾರಿ‌ ಜಿಲ್ಲೆ ಕೂಡ್ಲಗಿ ತಾಲೂಕಿನ ಉಡೇಮ್ ಗ್ರಾಮದ ಅರ್ಚನಾ(11) ಅನಾರೋಗ್ಯದಿಂದ ತಿರುಮಲ […]

ಡ್ರಿಪ್ ಬಾಟಲಿ ಸಮೇತ ಬಸ್ ನಿಲ್ದಾಣದಲ್ಲಿ ಬಾಲಕಿ! ಆರೋಗ್ಯ ಸಚಿವರ ಪಕ್ಕದ ಊರಿನಲ್ಲೇ ಕರುಣಾಜನಕ ದೃಶ್ಯ!!!
ಸಾಧು ಶ್ರೀನಾಥ್​
|

Updated on:Feb 04, 2020 | 5:21 PM

Share

ಚಿತ್ರದುರ್ಗ: ಇಡೀ ವಿಶ್ವವೇ ಮಾರಕ ಕೊರೊನಾ ವೈರಸ್​ಗೆ ಬಿಚ್ಚಿಬಿದ್ದಿದೆ. ಎಲ್ಲಾ ಆಸ್ಪತ್ರೆಗಳಲ್ಲೂ ಸೂಕ್ತ ಚಿಕಿತ್ಸೆ ನೀಡಲು ವಿಶೇಷವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ತುರ್ತು  ಎದುರಾಗಿದೆ. ಇಂತಹ ಸಮಯದಲ್ಲಿ ಅಮಾಯಕ ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡದೆ, ಆಸ್ಪತ್ರೆಯಿಂದ  ಹೊರಹಾಕಿರುವ ಅಮಾನವೀಯ ಘಟನೆ ಆರೋಗ್ಯ ಸಚಿವ ಶ್ರೀರಾಮುಲು ಅವರ ಪಕ್ಕದ ಊರಿನಲ್ಲೇ ನಡೆದಿದೆ.

ಚಳ್ಳಕೆರೆ ಪಟ್ಟಣದಲ್ಲಿರುವ ತಿರುಮಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಹೊರಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಬಳ್ಳಾರಿ‌ ಜಿಲ್ಲೆ ಕೂಡ್ಲಗಿ ತಾಲೂಕಿನ ಉಡೇಮ್ ಗ್ರಾಮದ ಅರ್ಚನಾ(11) ಅನಾರೋಗ್ಯದಿಂದ ತಿರುಮಲ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ.

ಆದ್ರೆ, ಹಣ ಪಾವತಿಸದ ಕಾರಣ ಚಿಕಿತ್ಸೆಯನ್ನು ಅರ್ಧಕ್ಕೆ‌ ನಿಲ್ಲಿಸಿ, ಬಾಲಕಿಯನ್ನು ಹೊರ ಕಳುಹಿಸಿದ್ದಾರೆ ಎಂದು ವೈದ್ಯರ ವಿರುದ್ಧ ಆರೋಪ ಮಾಡಲಾಗಿದೆ. ಆಸ್ಪತ್ರೆಯಿಂದ ಹೊರಬಂದ ಬಾಲಕಿ ಮತ್ತು ತಾಯಿ ಡ್ರಿಪ್ ಬಾಟಲಿ ಸಮೇತ ಬಸ್ ನಿಲ್ದಾಣದಲ್ಲಿ ನಿಂತಿರುವ ಕರುಣಾಜನಕ ದೃಶ್ಯ ಫುಲ್ ವೈರಲ್ ಆಗಿದೆ.

ಈ ಬಗ್ಗೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪ್ರಕರಣ ಡಿಹೆಚ್ಒ ಡಾ. ಫಾಲಾಕ್ಷ ಅವರ ಗಮನಕ್ಕೆ ಬಂದಿದ್ದು ಭೇಟಿ ನೀಡಿ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

Published On - 4:49 pm, Tue, 4 February 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ