AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ. ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ […]

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on:Nov 23, 2020 | 9:34 AM

Share

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ.

ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ ಹಂಪ್‌ನಲ್ಲಿ ಬೈಕ್ ಜಂಪ್ ಆಗಿ ಬೈಕ್ ಹಿಂಬದಿ ಕುಳಿತಿದ್ದ ಯೋಧನ ಪತ್ನಿ ಪುಷ್ಪಲತಾ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಪತ್ನಿಯ ಸಾವಿನಿಂದ ಗಡಿ ಕಾಯೋ ಯೋಧ ರಸ್ತೆಯಲ್ಲಿ ಪತ್ನಿಯನ್ನು ಅಪ್ಪಿಕೊಂಡು ಕಣ್ಣೀರು ಹಾಕಿ‌ ಗೋಳಾಡಿದ್ದು ಸ್ಥಳದಲ್ಲಿ ಕರುಣಾಜನಕ ಸನ್ನಿವೇಶ ನಿರ್ಮಾಣವಾಗಿತ್ತು. ಇಂದು ಬೆಳಗ್ಗೆ ಕರ್ತವ್ಯಕ್ಕೆ ಜಮ್ಮು ಕಾಶ್ಮೀರಕ್ಕೆ ಹೊರಡಬೇಕಿದ್ದ ಯೋಧ ಪತ್ನಿಯನ್ನು ಕಳೆದುಕೊಂಡಿದ್ದಾರೆ. ಪತ್ನಿಯನ್ನು ಹಿರೆಮಳಗಾವಿ ಗ್ರಾಮದಲ್ಲಿರುವ ತವರು ಮನೆಗೆ ಬಿಡಲು ಹೋಗುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಷ್ಪಲತಾ ಸಾವಿಗೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಆಯತಪ್ಪಿ ಬಿದ್ದು ಸಾವು

Published On - 9:29 am, Mon, 23 November 20

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ