AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ. ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ […]

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು
ಆಯೇಷಾ ಬಾನು
|

Updated on:Nov 23, 2020 | 9:34 AM

Share

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ.

ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ ಹಂಪ್‌ನಲ್ಲಿ ಬೈಕ್ ಜಂಪ್ ಆಗಿ ಬೈಕ್ ಹಿಂಬದಿ ಕುಳಿತಿದ್ದ ಯೋಧನ ಪತ್ನಿ ಪುಷ್ಪಲತಾ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಪತ್ನಿಯ ಸಾವಿನಿಂದ ಗಡಿ ಕಾಯೋ ಯೋಧ ರಸ್ತೆಯಲ್ಲಿ ಪತ್ನಿಯನ್ನು ಅಪ್ಪಿಕೊಂಡು ಕಣ್ಣೀರು ಹಾಕಿ‌ ಗೋಳಾಡಿದ್ದು ಸ್ಥಳದಲ್ಲಿ ಕರುಣಾಜನಕ ಸನ್ನಿವೇಶ ನಿರ್ಮಾಣವಾಗಿತ್ತು. ಇಂದು ಬೆಳಗ್ಗೆ ಕರ್ತವ್ಯಕ್ಕೆ ಜಮ್ಮು ಕಾಶ್ಮೀರಕ್ಕೆ ಹೊರಡಬೇಕಿದ್ದ ಯೋಧ ಪತ್ನಿಯನ್ನು ಕಳೆದುಕೊಂಡಿದ್ದಾರೆ. ಪತ್ನಿಯನ್ನು ಹಿರೆಮಳಗಾವಿ ಗ್ರಾಮದಲ್ಲಿರುವ ತವರು ಮನೆಗೆ ಬಿಡಲು ಹೋಗುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಷ್ಪಲತಾ ಸಾವಿಗೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಆಯತಪ್ಪಿ ಬಿದ್ದು ಸಾವು

Published On - 9:29 am, Mon, 23 November 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!