AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ. ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ […]

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು
ಆಯೇಷಾ ಬಾನು
|

Updated on:Nov 23, 2020 | 9:34 AM

Share

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ.

ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ ಹಂಪ್‌ನಲ್ಲಿ ಬೈಕ್ ಜಂಪ್ ಆಗಿ ಬೈಕ್ ಹಿಂಬದಿ ಕುಳಿತಿದ್ದ ಯೋಧನ ಪತ್ನಿ ಪುಷ್ಪಲತಾ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಪತ್ನಿಯ ಸಾವಿನಿಂದ ಗಡಿ ಕಾಯೋ ಯೋಧ ರಸ್ತೆಯಲ್ಲಿ ಪತ್ನಿಯನ್ನು ಅಪ್ಪಿಕೊಂಡು ಕಣ್ಣೀರು ಹಾಕಿ‌ ಗೋಳಾಡಿದ್ದು ಸ್ಥಳದಲ್ಲಿ ಕರುಣಾಜನಕ ಸನ್ನಿವೇಶ ನಿರ್ಮಾಣವಾಗಿತ್ತು. ಇಂದು ಬೆಳಗ್ಗೆ ಕರ್ತವ್ಯಕ್ಕೆ ಜಮ್ಮು ಕಾಶ್ಮೀರಕ್ಕೆ ಹೊರಡಬೇಕಿದ್ದ ಯೋಧ ಪತ್ನಿಯನ್ನು ಕಳೆದುಕೊಂಡಿದ್ದಾರೆ. ಪತ್ನಿಯನ್ನು ಹಿರೆಮಳಗಾವಿ ಗ್ರಾಮದಲ್ಲಿರುವ ತವರು ಮನೆಗೆ ಬಿಡಲು ಹೋಗುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಷ್ಪಲತಾ ಸಾವಿಗೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಆಯತಪ್ಪಿ ಬಿದ್ದು ಸಾವು

Published On - 9:29 am, Mon, 23 November 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ