AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ. ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ […]

ಮೊಬೈಲ್​ನಲ್ಲಿ ಮಾತ್ನಾಡ್ತಾ ಬೈಕ್ ಚಾಲನೆ, ಹಂಪ್‌ ಜಂಪ್ ಆಗಿ ಹಿಂದಿದ್ದ ಯೋಧನ ಪತ್ನಿ ಸಾವು
ಆಯೇಷಾ ಬಾನು
|

Updated on:Nov 23, 2020 | 9:34 AM

Share

ಬಾಗಲಕೋಟೆ: ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಬೈಕ್ ಚಾಲನೆ ವೇಳೆ ಹಂಪ್‌ನಲ್ಲಿ ಬೈಕ್ ಹಾರಿದ್ದರಿಂದ ಹಿಂದೆ ಸವಾರಿ ಮಾಡುತ್ತಿದ್ದ ಯೋಧನ ಪತ್ನಿ ಕೆಳಕ್ಕೆ ಬಿದ್ದು ಮೃತಪಟ್ಟ ದುರ್ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದ ಬಳಿ ನಡೆದಿದೆ. ಯೋಧ ಶೇಖರಯ್ಯ ಪತ್ನಿ ಪುಷ್ಪಲತಾ(35) ಮೃತ ದುರ್ದೈವಿ.

ಬೈಕ್‌ನಲ್ಲಿ ಹೊರಡುವ ವೇಳೆ ಮಗನ ವಿಡಿಯೋ ಕಾಲ್ ಬಂದಿದೆ. ಹೀಗಾಗಿ ಯೋಧ ಶೇಖರಯ್ಯ ಮಗನ ಜೊತೆ ಮಾತನಾಡುತ್ತಲೇ ಬೈಕ್ ಚಲಾಯಿಸುತ್ತಿದ್ದರು. ಈ ವೇಳೆ ಮುಂದಿದ್ದ ಹಂಪ್‌ ಗಮನಿಸದೆ ಬೈಕ್ ಓಡಿಸಿದ ಪರಿಣಾಮ ಹಂಪ್‌ನಲ್ಲಿ ಬೈಕ್ ಜಂಪ್ ಆಗಿ ಬೈಕ್ ಹಿಂಬದಿ ಕುಳಿತಿದ್ದ ಯೋಧನ ಪತ್ನಿ ಪುಷ್ಪಲತಾ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಪತ್ನಿಯ ಸಾವಿನಿಂದ ಗಡಿ ಕಾಯೋ ಯೋಧ ರಸ್ತೆಯಲ್ಲಿ ಪತ್ನಿಯನ್ನು ಅಪ್ಪಿಕೊಂಡು ಕಣ್ಣೀರು ಹಾಕಿ‌ ಗೋಳಾಡಿದ್ದು ಸ್ಥಳದಲ್ಲಿ ಕರುಣಾಜನಕ ಸನ್ನಿವೇಶ ನಿರ್ಮಾಣವಾಗಿತ್ತು. ಇಂದು ಬೆಳಗ್ಗೆ ಕರ್ತವ್ಯಕ್ಕೆ ಜಮ್ಮು ಕಾಶ್ಮೀರಕ್ಕೆ ಹೊರಡಬೇಕಿದ್ದ ಯೋಧ ಪತ್ನಿಯನ್ನು ಕಳೆದುಕೊಂಡಿದ್ದಾರೆ. ಪತ್ನಿಯನ್ನು ಹಿರೆಮಳಗಾವಿ ಗ್ರಾಮದಲ್ಲಿರುವ ತವರು ಮನೆಗೆ ಬಿಡಲು ಹೋಗುವಾಗ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುಷ್ಪಲತಾ ಸಾವಿಗೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಆಯತಪ್ಪಿ ಬಿದ್ದು ಸಾವು

Published On - 9:29 am, Mon, 23 November 20

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್