ಮಳೆರಾಯನ ಮುನಿಸು: 100 ವರ್ಷ ಹಳೆಯ ಯಮಲೂರಿನ ಮುನೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ. ರಾತ್ರಿ ಸುರಿದ ಮಳೆಗೆ ರಾಜಕಾಲುವೆ ಒಡೆದು ಹೋಗಿ ಸುಮಾರು 100 ವರ್ಷ ಹಳೆಯದಾದ ಯಮಲೂರಿನಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನ ದೇಗುಲದೊಳಗೆ ನೀರು ನುಗ್ಗಿದೆ. ದೇವರ ದರ್ಶನಕ್ಕೂ ಅಡ್ಡಿಯಾಗಿದ್ದು ಇಡೀ ಯಮಲೂರು ಕೆರೆಯಂತಾಗಿದೆ.

ಮಳೆರಾಯನ ಮುನಿಸು: 100 ವರ್ಷ ಹಳೆಯ ಯಮಲೂರಿನ ಮುನೇಶ್ವರ ಸ್ವಾಮಿ ದೇವಸ್ಥಾನ ಜಲಾವೃತ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 21, 2020 | 12:24 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಯಮಲೂರಿನಲ್ಲಿ ಮುನೇಶ್ವರಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಬಹಳಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿವೆ. ಮನೆಗಳು, ದೇವಸ್ಥಾನಗಳಿಗೆ ಜಲದಿಗ್ಬಂಧನವಾಗಿದೆ.

ರಾತ್ರಿ ಸುರಿದ ಮಳೆಗೆ ರಾಜಕಾಲುವೆ ಒಡೆದು ಹೋಗಿ ಸುಮಾರು 100 ವರ್ಷ ಹಳೆಯದಾದ ಯಮಲೂರಿನಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನ ದೇಗುಲದೊಳಗೆ ನೀರು ನುಗ್ಗಿದೆ. ದೇವರ ದರ್ಶನಕ್ಕೂ ಅಡ್ಡಿಯಾಗಿದ್ದು ಇಡೀ ಯಮಲೂರು ಕೆರೆಯಂತಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us