ಜನರಿಗೆ ತಲುಪಬೇಕಿದ್ದ ಆಯುಷ್ಮಾನ್ ಭಾರತ್ ಕಾರ್ಡ್​ಗಳು ಚರಂಡಿ ಪಾಲು!

ದಾವಣಗೆರೆ:ಸಾಮಾನ್ಯ ಜನರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಎಂಬ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಕಾರ್ಡ್​ಗಳನ್ನು, ಸಂಬಂಧಪಟ್ಟ ಜನರಿಗೆ ತಲುಪಿಸದೆ ಪೋಸ್ಟ್​ಮ್ಯಾನ್, ಚರಂಡಿಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕೇಂದ್ರ ಸರ್ಕಾರ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು, ಪೋಸ್ಟ್​ಮ್ಯಾನ್ ಜನರಿಗೆ ತಲುಪಿಸದೆ ಚರಂಡಿಯಲ್ಲಿ ಬಿಸಾಡಿ ಹೋಗಿದ್ದಾನೆ. ಚರಂಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು ಕಂಡ ಸ್ಥಳೀಯರು, ಈ ವಿಚಾರವನ್ನು ತಹಸೀಲ್ದಾರರಿಗೆ ಮುಟ್ಟಿಸಿದ್ದಾರೆ. […]

ಜನರಿಗೆ ತಲುಪಬೇಕಿದ್ದ ಆಯುಷ್ಮಾನ್ ಭಾರತ್ ಕಾರ್ಡ್​ಗಳು ಚರಂಡಿ ಪಾಲು!
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Aug 22, 2020 | 10:50 AM

ದಾವಣಗೆರೆ:ಸಾಮಾನ್ಯ ಜನರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಎಂಬ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಕಾರ್ಡ್​ಗಳನ್ನು, ಸಂಬಂಧಪಟ್ಟ ಜನರಿಗೆ ತಲುಪಿಸದೆ ಪೋಸ್ಟ್​ಮ್ಯಾನ್, ಚರಂಡಿಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕೇಂದ್ರ ಸರ್ಕಾರ ಆರೋಗ್ಯ ಚಿಕಿತ್ಸೆಗಾಗಿ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು, ಪೋಸ್ಟ್​ಮ್ಯಾನ್ ಜನರಿಗೆ ತಲುಪಿಸದೆ ಚರಂಡಿಯಲ್ಲಿ ಬಿಸಾಡಿ ಹೋಗಿದ್ದಾನೆ.

ಚರಂಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್​ಗಳನ್ನು ಕಂಡ ಸ್ಥಳೀಯರು, ಈ ವಿಚಾರವನ್ನು ತಹಸೀಲ್ದಾರರಿಗೆ ಮುಟ್ಟಿಸಿದ್ದಾರೆ. ವಿಚಾರ ತಿಳಿದ ದಾವಣಗೆರೆ ತಹಸೀಲ್ದಾರ್ ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಪೋಸ್ಟ್​ಮ್ಯಾನ್ ಈಗ ನಾಪತ್ತೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪೋಸ್ಟ್​ಮ್ಯಾನ್​ನನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us