AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಳೆತು ನಾರುತಿವೆ ನೆರೆಪೀಡಿತರ ಆಹಾರ ಕಿಟ್​ಗಳು, ಅಧಿಕಾರಿಗಳಿಗೆ ಮಾನವಿಯತೆಯೇ ಇಲ್ವಾ?

ಗದಗ : ಸರ್ಕಾರ ಮತ್ತು ಸರ್ಕಾರಿ ಅಧಿಕಾಗಳೆಂದ್ರೆ ಜನರಲ್ಲಿರೋ ಭಾವನೆ ಅಷ್ಟಕಷ್ಟೆ. ಇದಕ್ಕೆ ಕಾರಣಗಳೂ ಇಲ್ಲದಿಲ್ಲ. ಇಂಥ ಸರ್ಕಾರಿ ಅಧಿಕಾರಿಗಳ ನಿರ್ಲ್ಯಕ್ಷ್ಯ ಮತ್ತು ಬೇಜವಾಬ್ದಾರಿಗೆ ಮತ್ತೊಂದು ಉದಾಹರಣೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಹತ್ತು ತಿಂಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿದ ಸಾವಿರಾರು ಜನ ನಿರಾಶ್ರಿತರಿಗಾಗಿ ಸರ್ಕಾರ ನೀಡಿದ್ದ ಆಹಾರ ಕಿಟ್‌ಗಳನ್ನ ನೀಡದೇ ಅಧಿಕಾರಿಗಳು ಹಾಳು ಮಾಡಿ ಮಾನವಿಯತೆನ್ನೇ ಕೊಂದಿದ್ದಾರೆ. ಪ್ರವಾಹಕ್ಕೆ ತತ್ತರಿಸಿದ್ದ ಗದಗ ಜಿಲ್ಲೆಯ 42 ಗ್ರಾಮಗಳು ಹೌದು, ಗದಗ ಜಿಲ್ಲೆಯ ನರಗುಂದ ಹಾಗೂ […]

ಕೊಳೆತು ನಾರುತಿವೆ ನೆರೆಪೀಡಿತರ ಆಹಾರ ಕಿಟ್​ಗಳು, ಅಧಿಕಾರಿಗಳಿಗೆ ಮಾನವಿಯತೆಯೇ ಇಲ್ವಾ?
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Jun 15, 2020 | 11:06 AM

Share

ಗದಗ : ಸರ್ಕಾರ ಮತ್ತು ಸರ್ಕಾರಿ ಅಧಿಕಾಗಳೆಂದ್ರೆ ಜನರಲ್ಲಿರೋ ಭಾವನೆ ಅಷ್ಟಕಷ್ಟೆ. ಇದಕ್ಕೆ ಕಾರಣಗಳೂ ಇಲ್ಲದಿಲ್ಲ. ಇಂಥ ಸರ್ಕಾರಿ ಅಧಿಕಾರಿಗಳ ನಿರ್ಲ್ಯಕ್ಷ್ಯ ಮತ್ತು ಬೇಜವಾಬ್ದಾರಿಗೆ ಮತ್ತೊಂದು ಉದಾಹರಣೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಹತ್ತು ತಿಂಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿದ ಸಾವಿರಾರು ಜನ ನಿರಾಶ್ರಿತರಿಗಾಗಿ ಸರ್ಕಾರ ನೀಡಿದ್ದ ಆಹಾರ ಕಿಟ್‌ಗಳನ್ನ ನೀಡದೇ ಅಧಿಕಾರಿಗಳು ಹಾಳು ಮಾಡಿ ಮಾನವಿಯತೆನ್ನೇ ಕೊಂದಿದ್ದಾರೆ.

ಪ್ರವಾಹಕ್ಕೆ ತತ್ತರಿಸಿದ್ದ ಗದಗ ಜಿಲ್ಲೆಯ 42 ಗ್ರಾಮಗಳು ಹೌದು, ಗದಗ ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ವಾಸನ, ಕೊಣ್ಣೂರ, ಮೆಣಸಗಿ, ಹೊಳೆ ಆಲೂರು ಸೇರಿದಂತೆ 42 ಗ್ರಾಮಗಳು ಮಲಪ್ರಭೆ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದಾಗಿ ನೀರು ನುಗ್ಗಿ ಜಲಾವೃತ ಗೊಂಡಿದವು. ಆ 42 ಗ್ರಾಮಗಳ ಜನರ ಬದುಕು ಮೂರಾಬಟ್ಟೆಯಾಗಿತ್ತು. ಅನ್ನ ನೀರು ಸಿಗದೆ ಅದೆಷ್ಟೋ ಜನರು ಪರದಾಡಿದ್ರು. ವಸತಿ ವ್ಯವಸ್ಥೆ ಇಲ್ದೆ ಅದೆಷ್ಟೋ ಕುಟುಂಬಗಳು ರಸ್ತೆ ಬದಿಯಲ್ಲಿ ಗುಡಿಸಲು ಹಾಕಿ ಜೀವನ ಸಾಗಿಸಿದ್ರು. ಇದನ್ನೆಲ್ಲಾ ನೋಡಿದ ನಾಡಿನ ಜನರು ಜಲಾಸುರನ ಆರ್ಭಟಕ್ಕೆ ನಲುಗಿದವರಿಗಾಗಿ ಅಗತ್ಯ ವಸ್ತುಗಳನ್ನು ನೀಡಿ ಸಹಾಯ ಮಾಡಿದ್ರು.

ಅಧಿಕಾರಿಗಳ ಬೇಜವಾಬ್ದಾರಿಗೆ ಆಹಾರ ಕಿಟ್‌ಗಳು ನಾಶ ಆದ್ರೇ ಅದೇ ಪ್ರವಾಹ ಪೀಡಿತ ಪ್ರದೇಶದಲ್ಲಿನ ಅಧಿಕಾರಿಗಳು ಮಹಾ ಬೇಜವಾಬ್ದಾರಿ ತೋರಿದ್ದಾರೆ. ನೆರೆ ಸಂತ್ರಸ್ತರಿಗಾಗಿ ರಾಜ್ಯ ಸರ್ಕಾರ ನೀಡಿದ್ದ ದಿನಸಿ ಕಿಟ್ ಸಾಮಗ್ರಿಗಳನ್ನು ವಿತರಣೆ ಮಾಡದೆ ಕೊಳೆಯುವಂತೆ ಮಾಡಿದ್ದಾರೆ. ಅದ್ರಲ್ಲೂ ಗದಗ ಜಿಲ್ಲೆ ರೋಣ ತಾಲೂಕಿನ ನವಗ್ರಾಮ ಮೆಣಸಗಿಯ ಪಶು ಆಸ್ಪತ್ರೆಯಲ್ಲಿ ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆಂದು ನೀಡಿದ 380 ಕಿಟ್‌ಗಳು 10 ತಿಂಗಳಲ್ಲಿಂದ ವಿತರಣೆ ಮಾಡದೆ ಅಲ್ಲಿಯೇ ಕೊಳೆತು ನಾರುತಿವೆ.

ಬಡ ಜನರ ಹೊಟ್ಟೆ ಸೇರಬೇಕಿದ್ದ ಆಹಾರ ಧಾನ್ಯಗಳು ಹುಳುಗಳ ಪಾಲಾಗುವಂತೆ ಮಾಡಿದ್ದಾರೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು. ಇದು ನೆರೆ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಆಹಾರ ಕಿಟ್‌ನಲ್ಲಿ ಏನೇನಿದ್ದವು? ಮೆಣಸಗಿ ಗ್ರಾಮದ ಪಶು ಆಸ್ಪತ್ರೆಯಲ್ಲಿ ಹೀಗೆ ಕೊಳೆತು ಹುಳು ಹತ್ತಿರುವ ಕಿಟ್‌ಗಳಲ್ಲಿ 10 ಕೆಜಿ ಅಕ್ಕಿ, 1 ಲೀಟರ್ ಅಡುಗೆ ಎಣ್ಣೆ, 1 ಕೆಜಿ ಉಪ್ಪು, ತೊಗರಿ ಬೆಳೆ, 5 ಲೀಟರ್ ಸೀಮೆ ಎಣ್ಣೆ ನೀಡಲಾಗಿತ್ತು. ಇದಕ್ಕಾಗಿ ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ.

ಸರ್ಕಾರ ನಿರಾಶ್ರಿತರಿಗಾಗಿ ಇಷ್ಟೇಲ್ಲಾ ಮಾಡಿದ್ರೂ, ನೀರಾಶ್ರಿತರಿಗಾಗಿ ನೀಡಿರುವ ಕಿಟ್‌ಗಳು ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಕೆಟ್ಟು ಹೋಗಿವೆ. ಸರ್ಕಾರ ಕೂಡಲೇ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಅಮಾನತು ಮಾಡಬೇಕು ಎಂದು ಸ್ಥಳೀಯ ನೀರಾಶ್ರಿತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Published On - 5:40 pm, Sun, 14 June 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು