AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಸೇವನೆಗೆ ಹಣ ಕೊಟಿಲ್ಲ ಅಂತ ಒನಕೆಯಿಂದ ಹೊಡೆದು ಪತ್ನಿಯನ್ನ ಕೊಂದು ತಾನೂ ಸತ್ತ..

ಕುಡಿಯೋಕೆ ಪತ್ನಿ ಹಣ ಕೊಡಲಿಲ್ಲ ಅಂತ ಆಕೆಯನ್ನು ಒನಕೆಯಿಂದ ಹೊಡೆದು ಕೊಲೆ ಮಾಡಿ ಬಳಿಕ ತಾನೂ ಕರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆದಿನಾರಾಯಣ.

ಮದ್ಯ ಸೇವನೆಗೆ ಹಣ ಕೊಟಿಲ್ಲ ಅಂತ ಒನಕೆಯಿಂದ ಹೊಡೆದು ಪತ್ನಿಯನ್ನ ಕೊಂದು ತಾನೂ ಸತ್ತ..
ಪತ್ನಿಯನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 25, 2020 | 7:29 AM

Share

ಚಿಕ್ಕಬಳ್ಳಾಪುರ: ಕುಡಿಯೋಕೆ ಪತ್ನಿ ಹಣ ಕೊಡಲಿಲ್ಲ ಅಂತ ದೊಣ್ಣೆಯಿಂದ ಹೊಡೆದು, 3 ದಿನಗಳ ಹಿಂದೆ ತನ್ನ ಪತ್ನಿಯನ್ನೇ ಕೊಂದಿದ್ದ ಆ ಪಾಪಿ. ಆದ್ರೆ ಈ ಕೊಲೆಯ ಪ್ರಾಯಶ್ಚಿತಕ್ಕೋ ಅಥವಾ ಅರೆಸ್ಟ್ ಆಗುವ ಭಯಕ್ಕೋ ಗೊತ್ತಿಲ್ಲ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿ ಕೊಂದ ಪಾಪಿ ಹೆಣವಾಗಿ ಸಿಕ್ಕಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿ ಗ್ರಾಮದಲ್ಲಿ 3 ದಿನಗಳ ಹಿಂದೆ ಆದಿನಾರಾಯಣ ಎಂಬಾತ, ಪತ್ನಿಯನ್ನ ಒನಕೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದ. ಅಂದು ಪೊಲೀಸರು ಮನೆಗೆ ಬರುವಷ್ಟರಲ್ಲಿ ಪರಾರಿಯಾಗಿದ್ದ ಅಸಾಮಿ, ಗ್ರಾಮದ ಹೊರಹೊಲಯದಲ್ಲಿರೋ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೆರೆಯಲ್ಲಿ ಶವ ತೇಲುತ್ತಿರೋದನ್ನ ನೋಡಿದ ಸ್ಥಳೀಯರು, ಬಾಗೇಪಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ರು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಶವ ಮೇಲೆ ತೆಗೆದು ಸಂಬಂಧಿಕರಿಗೆ ಒಪ್ಪಿಸಿದ್ರು.

ಮದ್ಯ ಸೇವನೆಗೆ ಪತ್ನಿ ಹಣ ಕೊಡಲಿಲ್ಲ ಅಂತ, ಮೂರು ದಿನಗಳ ಹಿಂದೆ ತನ್ನ ಮಕ್ಕಳ ಸಮ್ಮುಖದಲ್ಲೇ ಪತ್ನಿಯನ್ನ ಹೊಡೆದು ಕೊಂದ ಆದಿನಾರಾಯಣನ ವಿರುದ್ಧ ಬಾಗೇಪಲ್ಲಿ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಹುಡುಕಾಟಕ್ಕೆ ಬಲೆ ಬೀಸಿದ್ರು. ಆದ್ರೆ ಆರೋಪಿ ಪತ್ತೆಯಾಗಿರಲಿಲ್ಲ. ಆದಿನಾರಾಯಣ ಪತ್ನಿಯನ್ನ ಕೊಂದ ದಿನವೇ ಕರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

ಒಟ್ನಲ್ಲಿ ಅನ್ಯಾಯವಾಗಿ ಮಕ್ಕಳ ಮುಂದೆ ತಾಯಿಯನ್ನು ಕೊಂದಿದ್ದ ಆದಿನಾರಾಯಣ, ಮಕ್ಕಳ ಮುಖವನ್ನು ನೋಡದೆ ಎಸ್ಕೇಪ್ ಆಗಿದ್ದ. ಈಗ ತಾನು ಸಾವಿನ ಮನೆ ಸೇರಿದ್ದರಿಂದ ಮಕ್ಕಳು ಅನಾಥರಾಗಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ