AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!

ಪತ್ನಿಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದ ಪತಿ.

ಅಪ್ರಾಪ್ತ ಬಾಲಕಿಯ ಮದುವೆಯಾಗಿ ಹತ್ಯೆಗೈದು.. ಮನೆಯಲ್ಲೇ ಬಚ್ಚಿಟ್ಟ ನರ ಹಂತಕ ಪತಿ!
ಪತ್ನಿ ಕೊಂದ ಕೊಲೆಗಾರ ಪತಿ ನರಸಿಂಹಮೂರ್ತಿ
ಆಯೇಷಾ ಬಾನು
| Edited By: |

Updated on: Dec 23, 2020 | 1:29 PM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿ, ಬಳಿಕ ಪಾಪಿ ಪತಿರಾಯ ಆಕೆಯನ್ನು ಹತ್ಯೆಗೈದು ಮನೆಯಲ್ಲಿ ಹೂತಿಟ್ಟಿದ್ದ ಅಮಾನುಷ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸ ಇಟಕಲೋಟಿ ಗ್ರಾಮದಲ್ಲಿ ನಡೆದಿದೆ. ನರಸಿಂಹಮೂರ್ತಿ ಪತ್ನಿಯನ್ನು ಹತ್ಯೆಗೈದವ.

ಗಾರೆ ಕೆಲಸ ಮಾಡಿಕೊಂಡಿದ್ದ ನರಸಿಂಹಮೂರ್ತಿ, 9 ತಿಂಗಳ ಹಿಂದೆ ಅಂದ್ರೆ ಏಪ್ರಿಲ್​ನಲ್ಲಿ 16 ವರ್ಷದ ಅಪ್ರಾಪ್ತೆ, ಸ್ವಂತ ಅಕ್ಕನ ಮಗಳನ್ನೇ ಓಡಿಸಿಕೊಂಡು ಹೋಗಿ ವಿವಾಹವಾಗಿದ್ದ. ಅಪ್ರಾಪ್ತೆಯ ತಂದೆ ಹನುಮಂತರಾಯಪ್ಪ ನಾಪತ್ತೆ ದೂರು ದಾಖಲಿಸಿದ್ದರು.

ಈ ಮಧ್ಯೆ, 15 ದಿನಗಳ ಹಿಂದೆ ಪತ್ನಿ ಹತ್ಯೆಗೈದು ಮನೆಯಲ್ಲಿ ಹೂತಿಟ್ಟು ಕಳೆದ 5 ದಿನಗಳಿಂದ ನರಸಿಂಹಮೂರ್ತಿ ನಾಪತ್ತೆಯಾಗಿದ್ದಾನೆ. ಗ್ರಾಮಕ್ಕೆ ಎಸಿ ಸೋಮಪ್ಪ ಖಡಕೋಳ ಹಾಗೂ ತಹಶೀಲ್ದಾರ್ ವಿಶ್ವನಾಥ, ಮಧುಗಿರಿ DySP ಪ್ರವೀಣ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಈಗ ಮನೆಯಲ್ಲಿ ಹೂತಿಟ್ಟಿದ್ದ ಶವವನ್ನು ಪೊಲೀಸರು ಹೊರತೆಗೆದು ಪೋಸ್ಟ್‌ಮಾರ್ಟಂಗೆ ಕಳಿಸಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆರೋಪಿ ನರಸಿಂಹಮೂರ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮಂಜುನಾಥ ಹಾಗೂ ಸತೀಶ್ ಎಂಬ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮಿ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ವರ್ಷಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ