AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಳಿಯಂತೆ ಸಾಕಿ ಗಿಡುಗನ ಕೈಗೆ ಕೊಟ್ಟಂತಾಯಿತು.. ಹೆಂಡತಿಯನ್ನೇ ಕೊಲೆ ಮಾಡಿದ ಪಾಪಿ ಗಂಡ

ಆಕೆ ಹೆತ್ತವರನ್ನು ಕಳೆದುಕೊಂಡು ಅನಾಥಳಾಗಿ ಅಜ್ಜಿಮನೆಯಲ್ಲಿ ಬೆಳೆದ ಹುಡುಗಿ. ಆದ್ರೂ ಆಕೆಯನ್ನ ಅಜ್ಜಿ ಪ್ರೀತಿಯಿಂದ ಸಾಕಿದ್ರು. ಆದ್ರೆ ಗಿಳಿಯಂತೆ ಸಾಕಿದ ಆಕೆಯನ್ನ ಗಿಡುಗನ ಕೈಗೆ ಕೊಟ್ಟು ಈಗ ಕಣ್ಣೀರು ಹಾಕುತ್ತಿದ್ದಾರೆ.

ಗಿಳಿಯಂತೆ ಸಾಕಿ ಗಿಡುಗನ ಕೈಗೆ ಕೊಟ್ಟಂತಾಯಿತು.. ಹೆಂಡತಿಯನ್ನೇ ಕೊಲೆ ಮಾಡಿದ ಪಾಪಿ ಗಂಡ
ಲಕ್ಷ್ಮಿ ಮತ್ತು ಪಾಪಿ ಗಂಡ ರುದ್ರಪ್ಪ ಮದುವೆ ಫೋಟೋ
ಆಯೇಷಾ ಬಾನು
|

Updated on:Jan 11, 2021 | 7:50 AM

Share

ಧಾರವಾಡ: ಹೆಂಡತಿಯನ್ನು ಉಸಿರುಗಟ್ಟಿಸಿ ಅಮಾನುಷವಾಗಿ ಕೊಂದ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಹುಲಗಿನಕಟ್ಟಿಯಲ್ಲಿ ನಡೆದಿದೆ. ಹುಲಗಿನಕಟ್ಟಿ ನಿವಾಸಿ ಲಕ್ಷ್ಮಿಯನ್ನು ರುದ್ರಪ್ಪ ಉಸಿರುಗಟ್ಟಿಸಿ ಅಮಾನುಷವಾಗಿ ಕೊಂದು ವಿಕೃತಿ ಮರೆದಿದ್ದಾನೆ. ಲಕ್ಷ್ಮೀ ಸಾವಿನಿಂದ ಆಕೆಯ ಅಜ್ಜಿಯ ಆಕ್ರಂದನ ಮುಗಿಲು ಮುಟ್ಟಿದೆ.

ತಂದೆ ತಾಯಿ ಇಲ್ಲದ ಲಕ್ಷ್ಮೀ ಅಜ್ಜಿ ಮನೆಯಲ್ಲಿ ಬೆಳೆದಿದ್ಲು. ಕಳೆದ ವರ್ಷ ಮೇ ತಿಂಗಳಲ್ಲಿ 30 ವರ್ಷದ ರುದ್ರಪ್ಪನ ಜೊತೆ ಲಕ್ಷ್ಮೀಯ ಮದುವೆ ಮಾಡಲಾಗಿತ್ತು. ಲಕ್ಷ್ಮೀ ಅಪ್ರಾಪ್ತಳಾಗಿದ್ದಳು. ಸಾಲದ್ದಕ್ಕೆ ರುದ್ಪಪ್ಪ ಕುಡುಕ ಬೇರೆ ಆಗಿದ್ದ. ಹೀಗಾಗಿ ಮದುವೆಯಾದ ಬಳಿಕ ಲಕ್ಷ್ಮೀ ತವರು ಮನೆಯಲ್ಲೆೇ ಇದ್ಲು. ರುದ್ರಪ್ಪ ಆಗಾಗ ಲಕ್ಷ್ಮೀ ಮನೆಗೆ ಕುಡಿದು ಬಂದು ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದನಂತೆ. ಈತನಿಗೆ ಹಿರಿಯರು ಬುದ್ಧಿ ಹೇಳಿದ್ರೂ ಕೇಳಿಲ್ಲ.

ಲಕ್ಷ್ಮೀ ಮನೆಗೆ ಬಂದು ಆಕೆಯನ್ನ ತನ್ನ ಮನೆಗೆ ಕಳುಹಿಸಿ ಕೊಡಿ ಅಂತಾ ಪೀಡಿಸುತ್ತಿದ್ದನಂತೆ. ಮೊನ್ನೆ ಸಂಜೆ ರುದ್ರಪ್ಪ ತನ್ನ ಹೊಲಕ್ಕೆ ಲಕ್ಷ್ಮೀಯನ್ನ ಕರೆದುಕೊಂಡು ಹೋಗಿದ್ದಾನೆ. ನಂತ್ರ ಅವಳಿಗೆ ಹಿಂಸೆ ಕೊಟ್ಟು ಹಗ್ಗದಿಂದ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಲಕ್ಷ್ಮೀ ಸತ್ತಿರೋದನ್ನು ಖಚಿತಪಡಿಸಿಕೊಂಡು ತಾನು ಅಲ್ಲೆ ಇದ್ದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಯಾರೋ ನೋಡಿ ಕಾಪಾಡಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಬಗ್ಗೆ ಕಲಘಟಗಿ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಅಪ್ಪ ಅಮ್ಮ ಇಲ್ಲದ ಅಪ್ರಾಪ್ತೆಯನ್ನ ಮದುವೆಯಾಗಿ ಆಕೆಗೆ ಚಿತ್ರ ಹಿಂಸೆ ಕೊಟ್ಟು ಕೊಂದ ಈ ಪಾಪಿಗೆ ತಕ್ಕ ಶಿಕ್ಷೆ ನೀಡಬೇಕಿದೆ.

ರುದ್ರಪ್ಪ

Published On - 7:48 am, Mon, 11 January 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?