AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಹುತ್ತರಿ ಸಂಭ್ರಮ: ಕೊಡವರ ಮನೆಗೆ ಧಾನ್ಯಲಕ್ಷ್ಮಿ ಆಗಮನ

ಕೊಡಗು ಜಿಲ್ಲೆಯಾದ್ಯಂತ ಹುತ್ತರಿ ಹಬ್ಬದ ಸಂಭ್ರಮ. ಧಾನ್ಯಲಕ್ಷ್ಮಿಯನ್ನು ಗದ್ದೆಯಿಂದ ಮನೆಗಳಿಗೆ ತುಂಬಿಸಿಕೊಳ್ಳೋ ಸಂತಸ. ಕೊಡವರ ಜನಪದ ಕಲೆಗಳು ಅನಾವರಣವಾಗುವುದು ಇದೇ ಹಬ್ಬದಲ್ಲಿ. ಸುಗ್ಗಿಹಬ್ಬ ಎಂದೇ ಪ್ರಸಿದ್ಧಿಯಾದ ಕೊಡಗಿನ ಹುತ್ತರಿ ಹಬ್ಬ ಹೇಗೆ ನಡೀತು ಅನ್ನೋದು ಇಲ್ಲಿದೆ ಓದಿ.

ಕೊಡಗಿನಲ್ಲಿ ಹುತ್ತರಿ ಸಂಭ್ರಮ: ಕೊಡವರ ಮನೆಗೆ ಧಾನ್ಯಲಕ್ಷ್ಮಿ ಆಗಮನ
ಕೊಡಗಿನಲ್ಲಿ ಹುತ್ತರಿ ಸಂಭ್ರಮ
ಆಯೇಷಾ ಬಾನು
|

Updated on: Dec 01, 2020 | 7:24 AM

Share

ಕೊಡಗು: ಜಿಲ್ಲೆಯಾದ್ಯಂತ ನಿನ್ನೆ ಹುತ್ತರಿ ಹಬ್ಬದ ಸಂಭ್ರಮ. ಕೊಡಗಿನ ಸುಗ್ಗಿಹಬ್ಬವೆಂದೇ ಹೆಸರಾಗಿದ ಹುತ್ತರಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಹುತ್ತರಿ ಎಂದರೆ ಹೊಸ ಅಕ್ಕಿ ಎಂದರ್ಥ. ಕೊಡಗಿನಲ್ಲಿ ಪುತ್ತರಿ ಎಂದೇ ಫೇಮಸ್. ಅಂದರೆ ಒಂದು ಶುಭಮುಹೂರ್ತದಲ್ಲಿ ಭತ್ತದ ಗದ್ದೆಯಿಂದ ಧಾನ್ಯಲಕ್ಷ್ಮಿಯನ್ನು ವಿಜೃಂಭಣೆಯಿಂದ ಮನೆಗೆ ತಂದು ತುಂಬಿಸಿಕೊಳ್ಳುವುದೇ ಹಬ್ಬದ ವಿಶೇಷ.

ಕೇರಳದ ಓಣಂ ಹಬ್ಬ ಕಳೆದು ಸರಿಯಾಗಿ ಮೂರು ತಿಂಗಳಲ್ಲಿ ಈ ಹಬ್ಬ ನಡೆಯುತ್ತದೆ. ಹಬ್ಬವನ್ನು ಜಿಲ್ಲೆಯ ಹಲವೆಡೆ ಹಗಲು ಆಚರಣೆ ಮಾಡಿದರೆ ಮತ್ತೆ ಕೆಲವೆಡೆ ರಾತ್ರಿ ಆಚರಣೆ ಮಾಡುತ್ತಾರೆ. ದೀಪಾವಳಿಯಂತೆ ಕೊಡಗಿನಲ್ಲಿ ಹುತ್ತರಿ ಹಬ್ಬಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ.

ಹಬ್ಬದ ದಿನ ಮೊದ್ಲು ಮನೆಯಲ್ಲಿ ನೆರೆಕಟ್ಟಿ, ನೈವೇಧ್ಯ ಅರ್ಪಿಸಿ ಹಿರಿಯರ ಮೂಲಕ ಮೆರವಣಿಗೆಯಲ್ಲಿ ಗದ್ದೆಗೆ ತೆರಳಲಾಗುತ್ತೆ. ಇಲ್ಲಿ ಭತ್ತದ ಗದ್ದೆಗೆ ಪೂಜೆ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿ ಎಲ್ಲಾರು ಒಟ್ಟಾಗಿ ಸಾಂಪ್ರದಾಯಿಕ ಉಡುಪಿನಲ್ಲಿ ಕದಿರು ಹಿಡಿದು ಮನೆಗೆ ಬರ್ತಾರೆ. ಹಬ್ಬದಲ್ಲಿ ತಂಬಿಟ್ಟು ಹಾಗೂ ಹುತ್ತರಿ ಗೆಣಸಿನ ಖಾದ್ಯಗಳನ್ನ ತಯಾರಿಸಿ ಭೋಜನ ಸವಿಯುತ್ತಾರೆ. ಇನ್ನು ಗದ್ದೆಯಲ್ಲಿ ಕದಿರು ತೆಗೆದ ಬಳಿಕ ಕೊಡಗಿನ ಸಾಂಪ್ರದಾಯಿಕ ನೃತ್ಯಕ್ಕೆ ಪುರುಷರು ಮಹಿಳೆಯರು ಹೆಜ್ಜೆ ಹಾಕಿದ್ರು.

ಒಟ್ನಲ್ಲಿ ವಿಶಿಷ್ಟ ಆಚರಣೆಯಿಂದಲೇ ಗಮನ ಸೆಳೆಯುವ ಹುತ್ತರಿ ಹಬ್ಬ ಸಂಭ್ರಮದಿಂದ ನೆರವೇರಿದೆ. ಕೊಡವರು ಸಂಭ್ರಮದಿಂದ ಹಬ್ಬ ಆಚರಿಸಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಹಬ್ಬದ ಮೆರಗು ಕಮ್ಮಿಯಾಗದಿರುವುದೇ ವಿಶೇಷ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ