ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಹೆಚ್​ವೈ ಮೇಟಿ ಮಗಳು ಅಸ್ವಸ್ಥ

ಬಾಗಲಕೋಟೆ: ಶಾಲಾ ಕಾರ್ಯಕ್ರಮವೊಂದರಲ್ಲಿ ಕೆಮಿಕಲ್ ಮಿಶ್ರಿತ ನೀರಿನಿಂದಾಗಿ ಮಾಜಿ ಸಚಿವ ಹೆಚ್.ವೈ.ಮೇಟಿ ಮಗಳು ಅಸ್ವಸ್ಥವಾಗಿರುವ ಘಟನೆ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. ತುಳಸಿಗೇರಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟನೆ ವೇಳೆ ಘಟನೆ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಬಲೂನ್ ಊದುವಾಗ ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಬಾಗಲಕೋಟೆ ಜಿ.ಪಂ. ಅಧ್ಯಕ್ಷೆ ಬಾಯಕ್ಕ ಮೇಟಿ ಅಸ್ವಸ್ಥಗೊಂಡಿದ್ದಾರೆ. ಗ್ಲಿಸರಿನ್ ಹಾಗು ಶಾಂಪು ಮಿಶ್ರಿತ ನೀರು ದೇಹದೊಳಗೆ ಸೇರ್ಪಡೆಯಾಗಿ ವಾಂತಿಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಬಾಯಕ್ಕ ಮೇಟಿಗೆ ಚಿಕಿತ್ಸೆ […]

ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಹೆಚ್​ವೈ ಮೇಟಿ ಮಗಳು ಅಸ್ವಸ್ಥ
ಸಾಧು ಶ್ರೀನಾಥ್​

Updated on: Jan 04, 2020 | 3:33 PM

ಬಾಗಲಕೋಟೆ: ಶಾಲಾ ಕಾರ್ಯಕ್ರಮವೊಂದರಲ್ಲಿ ಕೆಮಿಕಲ್ ಮಿಶ್ರಿತ ನೀರಿನಿಂದಾಗಿ ಮಾಜಿ ಸಚಿವ ಹೆಚ್.ವೈ.ಮೇಟಿ ಮಗಳು ಅಸ್ವಸ್ಥವಾಗಿರುವ ಘಟನೆ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. ತುಳಸಿಗೇರಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟನೆ ವೇಳೆ ಘಟನೆ ಸಂಭವಿಸಿದೆ.

ಕಾರ್ಯಕ್ರಮದಲ್ಲಿ ಬಲೂನ್ ಊದುವಾಗ ಕೆಮಿಕಲ್ ಮಿಶ್ರಿತ ನೀರು ಸೇವಿಸಿ ಬಾಗಲಕೋಟೆ ಜಿ.ಪಂ. ಅಧ್ಯಕ್ಷೆ ಬಾಯಕ್ಕ ಮೇಟಿ ಅಸ್ವಸ್ಥಗೊಂಡಿದ್ದಾರೆ. ಗ್ಲಿಸರಿನ್ ಹಾಗು ಶಾಂಪು ಮಿಶ್ರಿತ ನೀರು ದೇಹದೊಳಗೆ ಸೇರ್ಪಡೆಯಾಗಿ ವಾಂತಿಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಬಾಯಕ್ಕ ಮೇಟಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 3:31 pm, Sat, 4 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us