AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಟಿಬಿ ಏನೇ ಕೇಳಿದ್ರೂ ಮಾಡಿಕೊಡ್ತೇನೆ ಎಂದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು ಗ್ರಾಮಾಂತರ: ಕ್ಷೇತ್ರದ ಅಭಿವೃದ್ಧಿಗಾಗಿ ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿದ್ದಾರೆ. ಯಾರು ಏನೇ ಟೀಕೆ ಟಿಪ್ಪಣಿ ಮಾಡಿದ್ರು ತಲೆಕೆಡಿಸಿಕೊಳ್ಳದೆ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿದವರು. ಅವರ ಹತ್ತಿರ ಎಲ್ಲಾ ಇದ್ದರು ಸರಳ ಸಜ್ಜನಿಕೆಯ ವ್ಯಕ್ತಿ. ಎಂಟಿಬಿ ನಾಗರಾಜ್ ಹೇಳಿದ ಯಾವುದೇ ಕೆಲಸ ಇದ್ದರು ಫೈಲ್ ತೆಗೆದುಕೊಂಡು ಬನ್ನಿ. ನಾನು ಅದನ್ನ ಕೂಡಲೇ ಮಂಜೂರು ಮಾಡಿಕೊಡುತ್ತೇನೆ ಎಂದು ಹೊಸಕೋಟೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಹೊಸಕೋಟೆವರೆಗೆ ನಮ್ಮ ಮೆಟ್ರೋ: ಹೊಸಕೋಟೆ ಪಟ್ಟಣಕ್ಕೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರದಿಂದ ಅನುಮತಿ ಕೊಡಿಸುತ್ತೇನೆ. […]

ಸಾಧು ಶ್ರೀನಾಥ್​
|

Updated on:Nov 04, 2019 | 4:05 PM

Share

ಬೆಂಗಳೂರು ಗ್ರಾಮಾಂತರ: ಕ್ಷೇತ್ರದ ಅಭಿವೃದ್ಧಿಗಾಗಿ ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿದ್ದಾರೆ. ಯಾರು ಏನೇ ಟೀಕೆ ಟಿಪ್ಪಣಿ ಮಾಡಿದ್ರು ತಲೆಕೆಡಿಸಿಕೊಳ್ಳದೆ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿದವರು. ಅವರ ಹತ್ತಿರ ಎಲ್ಲಾ ಇದ್ದರು ಸರಳ ಸಜ್ಜನಿಕೆಯ ವ್ಯಕ್ತಿ. ಎಂಟಿಬಿ ನಾಗರಾಜ್ ಹೇಳಿದ ಯಾವುದೇ ಕೆಲಸ ಇದ್ದರು ಫೈಲ್ ತೆಗೆದುಕೊಂಡು ಬನ್ನಿ. ನಾನು ಅದನ್ನ ಕೂಡಲೇ ಮಂಜೂರು ಮಾಡಿಕೊಡುತ್ತೇನೆ ಎಂದು ಹೊಸಕೋಟೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಹೊಸಕೋಟೆವರೆಗೆ ನಮ್ಮ ಮೆಟ್ರೋ: ಹೊಸಕೋಟೆ ಪಟ್ಟಣಕ್ಕೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರದಿಂದ ಅನುಮತಿ ಕೊಡಿಸುತ್ತೇನೆ. ಪುನಃ ಹೊಸಕೋಟೆಗೆ ಬಂದ್ರೆ ನಾನೇ ಅದರ ಶಂಕುಸ್ಥಾಪನೆ ಮಾಡುತ್ತೇನೆ. ಎಂಟಿಬಿ ನಾಗರಾಜ್ ಏನೇ ಕೇಳಿದರೂ ಮಾಡಿಕೊಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಎಂಟಿಬಿ ಮತ್ತೆ ಎಂಎಲ್​ಎ ಆಗಬೇಕು: ಎಂಟಿಬಿ ನಾಗರಾಜ್ ಯಾವ ಪಕ್ಷದಿಂದ ಬೇಕಿದ್ರೂ ಸ್ಪರ್ಧಿಸಲಿ. ಇಂತಹ ಪ್ರಾಮಾಣಿಕ ವ್ಯಕ್ತಿ ಶಾಸಕನಾಗಬೇಕು ಎಂದು ಬಿಎಸ್​ವೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರದಂತೆ ಹೊಸಕೋಟೆ ಕ್ಷೇತ್ರ ಮಾದರಿಯಾಗಬೇಕು. ಇದಕ್ಕೆ ನಾನು ಯಾವುದೇ ಕೆಲಸ ಮಾಡಿಕೊಡಲು ಸಿದ್ಧ. ಯಡಿಯೂರಪ್ಪ ಮಾತ್ನಾಡಿದ್ರೆ ಹಿಂದೆ ಸರಿಯುವ ವ್ಯಕ್ತಿ ಅಲ್ಲ ಎಂದರು.

ಎಲ್ಲಾ ಕ್ಷೇತ್ರಗಳಿಗೂ ಹಣ ನೀಡ್ತೇನೆ: ಪ್ರವಾಹದಿಂದ 30ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಬೇಕಿದ್ರು ಸಹ ನಾನು ರಾಜ್ಯದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಹಣವನ್ನ ನೀಡುತ್ತೇನೆ. ಎಂಟಿಬಿ ನಾಗರಾಜ್ ಹಿಂದೆ ಒಳ್ಳೆಯ ಸಚಿವರಾಗಿದ್ರು, ಆದ್ರೆ ಹಿಂದಿನ ಸರ್ಕಾರ ಅವರಿಗೆ ಕೆರೆ ತುಂಬಿಸಲು ಹಣ ನೀಡಲಿಲ್ಲ. ಅಂದು ಹಣ ನೀಡಿದ್ರೆ, ಎಂಟಿಬಿ ರಾಜೀನಾಮೆ ನೀಡುವ ಪ್ರಸಂಗವೇ ಬರ್ತಿರಲಿಲ್ಲ ಎಂದು ಹಿಂದಿನ ಸರ್ಕಾರದ ವಿರುದ್ಧ ಬಿಎಸ್​ವೈ ಅಸಮಾಧಾನ ವ್ಯಕ್ತಪಡಿಸಿದರು.

ಹೊಸಕೋಟೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಮಂಜೂರಾತಿಗೆ ಅಧಿಕಾರಿಗಳ ಜೊತೆ ಮಾತ್ನಾಡಿ ಕ್ರಮ ಕೈಗೊಳ್ತೇವೆ. ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆ ಏನಿಲ್ಲ, ಕೇವಲ ಎಂಟಿಬಿ ಕ್ಷೇತ್ರ ಮಾತ್ರವಲ್ಲ, ಆದ್ಯತೆ ಮೇರೆಗೆ ಎಲ್ಲ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡುತ್ತೇವೆ ಎಂದರು.

Published On - 4:03 pm, Mon, 4 November 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ