AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಬೈಎಲೆಕ್ಷನ್ ಮಾಸ್ಟರ್’ ರಿಸಲ್ಟ್​ಗೂ ಮುನ್ನ ಸಚಿವ ಸೋಮಣ್ಣ ಫುಲ್​ ಜೋಶ್!

ಬೆಂಗಳೂರು: 15 ಶಾಸಕರು ಅನರ್ಹಗೊಂಡ ಪ್ರಯುಕ್ತ ಮೊನ್ನೆ ನಡೆದ 15 ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳಿದ್ದು ಹೊರಬೀಳಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಗೆಲುವು ಯಾರದಾಗಲಿದೆಯೋ ಎಂಬುದು ಎಲ್ಲರ ದುಗುಡಕ್ಕೆ ಕಾರಣವಾಗಿದೆ. ಆದ್ರೆ ಬಿಜೆಪಿ ಪಾಳಯ ತುಸು ಹೆಚ್ಚೇ ಅನಿಸುವಷ್ಟು ಬೀಗುತ್ತಿದೆ. ಗೆಲುವು ನಮ್ಮದೇ, ನಮ್ಮ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಆ ಪಕ್ಷದ ನಾಯಕರು ಆತ್ಮವಿಶ್ವಾಸದಲ್ಲಿದ್ದಾರೆ. ಇನ್ನು ಸಚಿವ ಸೋಮಣ್ಣ ಅವರಂತೂ ಫುಲ್​ ಜೋಶ್ ನಲ್ಲಿದ್ದಾರೆ. ಸಿಎಂ […]

‘ನಾನು ಬೈಎಲೆಕ್ಷನ್ ಮಾಸ್ಟರ್’ ರಿಸಲ್ಟ್​ಗೂ ಮುನ್ನ ಸಚಿವ ಸೋಮಣ್ಣ ಫುಲ್​ ಜೋಶ್!
ಸಾಧು ಶ್ರೀನಾಥ್​
|

Updated on:Dec 07, 2019 | 12:03 PM

Share

ಬೆಂಗಳೂರು: 15 ಶಾಸಕರು ಅನರ್ಹಗೊಂಡ ಪ್ರಯುಕ್ತ ಮೊನ್ನೆ ನಡೆದ 15 ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಾಳಿದ್ದು ಹೊರಬೀಳಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಗೆಲುವು ಯಾರದಾಗಲಿದೆಯೋ ಎಂಬುದು ಎಲ್ಲರ ದುಗುಡಕ್ಕೆ ಕಾರಣವಾಗಿದೆ. ಆದ್ರೆ ಬಿಜೆಪಿ ಪಾಳಯ ತುಸು ಹೆಚ್ಚೇ ಅನಿಸುವಷ್ಟು ಬೀಗುತ್ತಿದೆ. ಗೆಲುವು ನಮ್ಮದೇ, ನಮ್ಮ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲಿದೆ ಎಂದು ಆ ಪಕ್ಷದ ನಾಯಕರು ಆತ್ಮವಿಶ್ವಾಸದಲ್ಲಿದ್ದಾರೆ. ಇನ್ನು ಸಚಿವ ಸೋಮಣ್ಣ ಅವರಂತೂ ಫುಲ್​ ಜೋಶ್ ನಲ್ಲಿದ್ದಾರೆ.

ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನ ಇಂದು ಸಚಿವ ವಿ.ಸೋಮಣ್ಣ ಭೇಟಿಯಾಗಿ, ಫಲಿತಾಂಶದ ಬಗ್ಗೆ ಲೆಕ್ಕಾಚಾರ ಹಾಕಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ ‘ನಾನು ಉಪಚುನಾವಣೆಯ ಮಾಸ್ಟರ್’ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಲು ಗೆಲುವಿಗಿಂತ ಸ್ಥಿರತೆ, ಅಸ್ಥಿರತೆ ಬಗ್ಗೆ ಜನ ಯೋಚಿಸಿದ್ದಾರೆ. ಬಿಜೆಪಿ ಸರ್ಕಾರವನ್ನು ಮುಂದುವರಿಸುವುದು ಜನರ ಉದ್ದೇಶವಾಗಿದೆ. ಉಪಚುನಾವಣೆಯಲ್ಲಿ ಬಿಜೆಪಿ 12ರಿಂದ 13 ಸ್ಥಾನ ಗೆಲ್ಲುತ್ತದೆ. ಸೋತವರಿಗೆ ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತೆ. ಆದ್ರೆ ಸಿಎಂ ಬಿಎಸ್‌ವೈ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಈಶ್ವರಪ್ಪ ಹೇಳಿಕೆಗೆ ಸೋಮಣ್ಣ ಜಾರಿಕೆ ಉತ್ತರ: ‘ವಯಸ್ಸಿಗೆ ಬಂದವರು ಐಶ್ವರ್ಯಾ ರೈ ಬೇಕೆಂದು ಬಯಸ್ತಾರೆ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿರುವುದಕ್ಕೆ ಸೋಮಣ್ಣ ಪ್ರತಿಕ್ರಿಯೆಯಿಸಿದ್ದಾರೆ. ಈಶ್ವರಪ್ಪಗೆ ವಯಸ್ಸಾಗಿದೆ, ಹೀಗಾಗಿ ಆ ರೀತಿ ಹೇಳಿದ್ದಾರೆ. K.S. ಈಶ್ವರಪ್ಪ ಹೇಳಿಕೆ ಅವರಿಗೆ ಸೇರಿದ್ದು ಎಂದು ಸೋಮಣ್ಣ ಜಾರಿಕೊಂಡಿದ್ದಾರೆ.

Published On - 12:02 pm, Sat, 7 December 19

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!