AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ

ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ
ಲಕ್ಷ್ಮಣ್​ ಸವದಿ
ಆಯೇಷಾ ಬಾನು
|

Updated on: Dec 14, 2020 | 10:16 AM

Share

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಕೋಡಿಹಳ್ಳಿ ಚಂದ್ರಶೇಖರ್​ಗೂ ನಮಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ ಎಂದು ಆಗ್ರಹಿಸಿ ಸತತ ಮೂರುದಿನಗಳ ಕಾಲ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸಲಾಗಿತ್ತು. ಇಂದು ಈ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಮುಷ್ಕರವನ್ನು ಹಿಂಪಡೆಯುವುದಾಗಿ ತಿಳಿಸಿದ್ದ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರವನ್ನು ಮುಂದುವರೆಸಿದ್ದಾರೆ. ಆದರೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾಡಿದ ಲಕ್ಷ್ಮಣ ಸವದಿ, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಹರಿ ಹೈದಿದ್ದಾರೆ.

ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲ್ಲ: ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್​ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ. ಮುಷ್ಕರ ವಾಪಸ್​ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸುವೆ.

ನಿನ್ನೆಯ ದಿನ ಏನೆಲ್ಲಾ ಆಯಿತೆಂದು ಎಲ್ಲರಿಗೂ ಗೊತ್ತಿದೆ. ಆರ್ಥಿಕ ಇಲಾಖೆ ಸಾಧ್ಯ ಇಲ್ಲವೆಂದು ಮಾಹಿತಿ ನೀಡಿದೆ. ಹೀಗಾಗಿ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ರಾಜಕೀಯಪ್ರೇರಿತ. ಆತನಿ​ಗೂ ನಮಗೂ ಸಂಬಂಧವಿಲ್ಲ. ನಮ್ಮ ಕರೆಗೆ ಓಗೊಟ್ಟು ಸಿಬ್ಬಂದಿ ಇಂದು ಹಾಜರಾಗಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಮೆಜೆಸ್ಟಿಕ್‌ ನಿಲ್ದಾಣಕ್ಕೆ 8 ಬಿಎಂಟಿಸಿ ಬಸ್​ಗಳ ಆಗಮನ.. ಶಿವಾಜಿನಗರದಲ್ಲೂ ಬಸ್ ಸಂಚಾರ

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ