AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

ಆರಂಭದಲ್ಲಿ ನಾನು ಎಲ್ಲರನ್ನೂ ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಎಲ್ಲರನ್ನು ಖುಷಿ ಪಡಿಸೋದೇ ನನ್ನ ಉದ್ದೇಶವಾಗಿತ್ತು. ಆದರೆ, ಈಗ ನನಗೆ ಯಾವುದು ಖುಷಿ ನೀಡುತ್ತದೋ ಅಂಥ ಉಡುಪಗಳನ್ನು ಮಾತ್ರ ಧರಿಸುತ್ತೇನೆ ಎಂದರು.

ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
Skanda
|

Updated on: Dec 06, 2020 | 2:19 PM

Share

ಮುಂಬೈ: ಸ್ಟಾರ್​ ಕುಡಿ ಅನನ್ಯಾ ಪಾಂಡೆ ಸದಾ ಟ್ರೋಲಿಗರಿಗೆ ಆಹಾರವಾಗುತ್ತಲೇ ಇರುತ್ತಾರೆ. ನಾನು ತುಂಬಾನೇ ಸ್ಟ್ರಗಲ್​ ಮಾಡಿ ಚಿತ್ರರಂಗಕ್ಕೆ ಬಂದಿದ್ದೇನೆ ಎಂಬ ನಟಿಯ ಹೇಳಿಕೆಗೆ ಈ ಹಿಂದೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇದೀಗ, ಅನನ್ಯಾ ಬಟ್ಟೆ ವಿಚಾರದಲ್ಲಿ ಟ್ರೋಲ್​ ಆಗ್ತಿದ್ದಾರೆ. ಆದರೆ, ಎಲ್ಲಾ ಟ್ರೋಲಿಗರಿಗೆ ಈಗ ಅನನ್ಯಾನೇ ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ.

ಕರೀನಾ ಕಪೂರ್​ ಖಾನ್​ ಚ್ಯಾಟ್​ ಶೋನಲ್ಲಿ ಮಾತನಾಡಿದ ಅನನ್ಯಾ ಪಾಂಡೆ, ಆರಂಭದಲ್ಲಿ ನಾನು ಎಲ್ಲರನ್ನೂ ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಎಲ್ಲರನ್ನು ಖುಷಿ ಪಡಿಸೋದೇ ನನ್ನ ಉದ್ದೇಶವಾಗಿತ್ತು. ಆದರೆ, ಈಗ ನನಗೆ ಯಾವುದು ಖುಷಿ ನೀಡುತ್ತದೋ ಅಂಥ ಉಡುಪಗಳನ್ನು ಮಾತ್ರ ಧರಿಸುತ್ತೇನೆ ಎಂದರು.

ಟ್ರೋಲ್​ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅನನ್ಯಾ ನಾನು ಯಾವ ರೀತಿಯ ಬಟ್ಟೆ ಧರಿಸಿದರೂ ಟೀಕೆಗೆ ಒಳಗಾಗುತ್ತೇನೆ ಎಂಬ ವಿಚಾರ ಗೊತ್ತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ಬಟ್ಟೆಯ ಬಗ್ಗೆ ಅನೇಕರು ಪ್ರಶ್ನೆ ಮಾಡುತ್ತಾರೆ. ಆದರೆ, ನನಗೆ ಆ ಬಗ್ಗೆ ಚಿಂತೆ ಇಲ್ಲ. ನಾನು ಎಲ್ಲಿಯವರೆಗೆ ಖುಷಿಯಾಗಿರುತ್ತೇನೋ ಅಲ್ಲಿಯವರೆಗೆ ಇನ್​ಸ್ಟಾಗ್ರಾಂಗೆ ಫೋಟೋಗಳನ್ನು ಹಾಕುತ್ತಲೇ ಇರುತ್ತೇನೆ ಎಂದು ಹೇಳಿದರು. ಈ ಮೂಲಕ ಟ್ರೋಲ್​ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.

ಅನನ್ಯಾ ಪಾಂಡೆ ಇನ್​ಸ್ಟಾಗ್ರಾಂನಲ್ಲಿ ಹಾಕಿರುವ ಫೋಟೋಗಳಿಗೆ ಅನೇಕರು ಕೆಟ್ಟದಾಗಿ ಕಮೆಂಟ್​ ಹಾಕಿದ್ದರು. ಅವರು ತೊಡುವ ಉಡುಗೆ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಇನ್ನು, ಸಿನಿಮಾ ವಿಚಾರಕ್ಕೆ ಬರುವುದಾದರೆ ಅನನ್ಯಾ ಪಾಂಡೆ, ಶಕುನ್​ ಭತ್ರಾ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ, ದೀಪಿಕಾ ಪಡುಕೋಣೆ ಹಾಗೂ ಸಿದ್ಧಾರ್ಥ್​ ಚತುರ್ವೇದಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

View this post on Instagram

A post shared by Diet Sabya (@dietsabya)

ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್​ನ ಮಾಲ್ಡೀವ್ಸ್ ಡೇಸ್..

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!