AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

ಆರಂಭದಲ್ಲಿ ನಾನು ಎಲ್ಲರನ್ನೂ ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಎಲ್ಲರನ್ನು ಖುಷಿ ಪಡಿಸೋದೇ ನನ್ನ ಉದ್ದೇಶವಾಗಿತ್ತು. ಆದರೆ, ಈಗ ನನಗೆ ಯಾವುದು ಖುಷಿ ನೀಡುತ್ತದೋ ಅಂಥ ಉಡುಪಗಳನ್ನು ಮಾತ್ರ ಧರಿಸುತ್ತೇನೆ ಎಂದರು.

ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
Skanda
|

Updated on: Dec 06, 2020 | 2:19 PM

Share

ಮುಂಬೈ: ಸ್ಟಾರ್​ ಕುಡಿ ಅನನ್ಯಾ ಪಾಂಡೆ ಸದಾ ಟ್ರೋಲಿಗರಿಗೆ ಆಹಾರವಾಗುತ್ತಲೇ ಇರುತ್ತಾರೆ. ನಾನು ತುಂಬಾನೇ ಸ್ಟ್ರಗಲ್​ ಮಾಡಿ ಚಿತ್ರರಂಗಕ್ಕೆ ಬಂದಿದ್ದೇನೆ ಎಂಬ ನಟಿಯ ಹೇಳಿಕೆಗೆ ಈ ಹಿಂದೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇದೀಗ, ಅನನ್ಯಾ ಬಟ್ಟೆ ವಿಚಾರದಲ್ಲಿ ಟ್ರೋಲ್​ ಆಗ್ತಿದ್ದಾರೆ. ಆದರೆ, ಎಲ್ಲಾ ಟ್ರೋಲಿಗರಿಗೆ ಈಗ ಅನನ್ಯಾನೇ ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ.

ಕರೀನಾ ಕಪೂರ್​ ಖಾನ್​ ಚ್ಯಾಟ್​ ಶೋನಲ್ಲಿ ಮಾತನಾಡಿದ ಅನನ್ಯಾ ಪಾಂಡೆ, ಆರಂಭದಲ್ಲಿ ನಾನು ಎಲ್ಲರನ್ನೂ ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಎಲ್ಲರನ್ನು ಖುಷಿ ಪಡಿಸೋದೇ ನನ್ನ ಉದ್ದೇಶವಾಗಿತ್ತು. ಆದರೆ, ಈಗ ನನಗೆ ಯಾವುದು ಖುಷಿ ನೀಡುತ್ತದೋ ಅಂಥ ಉಡುಪಗಳನ್ನು ಮಾತ್ರ ಧರಿಸುತ್ತೇನೆ ಎಂದರು.

ಟ್ರೋಲ್​ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅನನ್ಯಾ ನಾನು ಯಾವ ರೀತಿಯ ಬಟ್ಟೆ ಧರಿಸಿದರೂ ಟೀಕೆಗೆ ಒಳಗಾಗುತ್ತೇನೆ ಎಂಬ ವಿಚಾರ ಗೊತ್ತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ಬಟ್ಟೆಯ ಬಗ್ಗೆ ಅನೇಕರು ಪ್ರಶ್ನೆ ಮಾಡುತ್ತಾರೆ. ಆದರೆ, ನನಗೆ ಆ ಬಗ್ಗೆ ಚಿಂತೆ ಇಲ್ಲ. ನಾನು ಎಲ್ಲಿಯವರೆಗೆ ಖುಷಿಯಾಗಿರುತ್ತೇನೋ ಅಲ್ಲಿಯವರೆಗೆ ಇನ್​ಸ್ಟಾಗ್ರಾಂಗೆ ಫೋಟೋಗಳನ್ನು ಹಾಕುತ್ತಲೇ ಇರುತ್ತೇನೆ ಎಂದು ಹೇಳಿದರು. ಈ ಮೂಲಕ ಟ್ರೋಲ್​ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.

ಅನನ್ಯಾ ಪಾಂಡೆ ಇನ್​ಸ್ಟಾಗ್ರಾಂನಲ್ಲಿ ಹಾಕಿರುವ ಫೋಟೋಗಳಿಗೆ ಅನೇಕರು ಕೆಟ್ಟದಾಗಿ ಕಮೆಂಟ್​ ಹಾಕಿದ್ದರು. ಅವರು ತೊಡುವ ಉಡುಗೆ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಇನ್ನು, ಸಿನಿಮಾ ವಿಚಾರಕ್ಕೆ ಬರುವುದಾದರೆ ಅನನ್ಯಾ ಪಾಂಡೆ, ಶಕುನ್​ ಭತ್ರಾ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ, ದೀಪಿಕಾ ಪಡುಕೋಣೆ ಹಾಗೂ ಸಿದ್ಧಾರ್ಥ್​ ಚತುರ್ವೇದಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

View this post on Instagram

A post shared by Diet Sabya (@dietsabya)

ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್​ನ ಮಾಲ್ಡೀವ್ಸ್ ಡೇಸ್..

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!