AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ

ಆರಂಭದಲ್ಲಿ ನಾನು ಎಲ್ಲರನ್ನೂ ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಎಲ್ಲರನ್ನು ಖುಷಿ ಪಡಿಸೋದೇ ನನ್ನ ಉದ್ದೇಶವಾಗಿತ್ತು. ಆದರೆ, ಈಗ ನನಗೆ ಯಾವುದು ಖುಷಿ ನೀಡುತ್ತದೋ ಅಂಥ ಉಡುಪಗಳನ್ನು ಮಾತ್ರ ಧರಿಸುತ್ತೇನೆ ಎಂದರು.

ಟ್ರೋಲ್​ಗಳಿಗೆ ತಿರುಗೇಟು: ಉಡುಗೆ ಬಗ್ಗೆ ಕಮೆಂಟ್​ ಮಾಡಿದವರಿಗೆ ಬಿಸಿಮುಟ್ಟಿಸಿದ ನಟಿ ಅನನ್ಯಾ ಪಾಂಡೆ
ಅನನ್ಯಾ ಪಾಂಡೆ
Skanda
|

Updated on: Dec 06, 2020 | 2:19 PM

Share

ಮುಂಬೈ: ಸ್ಟಾರ್​ ಕುಡಿ ಅನನ್ಯಾ ಪಾಂಡೆ ಸದಾ ಟ್ರೋಲಿಗರಿಗೆ ಆಹಾರವಾಗುತ್ತಲೇ ಇರುತ್ತಾರೆ. ನಾನು ತುಂಬಾನೇ ಸ್ಟ್ರಗಲ್​ ಮಾಡಿ ಚಿತ್ರರಂಗಕ್ಕೆ ಬಂದಿದ್ದೇನೆ ಎಂಬ ನಟಿಯ ಹೇಳಿಕೆಗೆ ಈ ಹಿಂದೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇದೀಗ, ಅನನ್ಯಾ ಬಟ್ಟೆ ವಿಚಾರದಲ್ಲಿ ಟ್ರೋಲ್​ ಆಗ್ತಿದ್ದಾರೆ. ಆದರೆ, ಎಲ್ಲಾ ಟ್ರೋಲಿಗರಿಗೆ ಈಗ ಅನನ್ಯಾನೇ ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ.

ಕರೀನಾ ಕಪೂರ್​ ಖಾನ್​ ಚ್ಯಾಟ್​ ಶೋನಲ್ಲಿ ಮಾತನಾಡಿದ ಅನನ್ಯಾ ಪಾಂಡೆ, ಆರಂಭದಲ್ಲಿ ನಾನು ಎಲ್ಲರನ್ನೂ ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಎಲ್ಲರನ್ನು ಖುಷಿ ಪಡಿಸೋದೇ ನನ್ನ ಉದ್ದೇಶವಾಗಿತ್ತು. ಆದರೆ, ಈಗ ನನಗೆ ಯಾವುದು ಖುಷಿ ನೀಡುತ್ತದೋ ಅಂಥ ಉಡುಪಗಳನ್ನು ಮಾತ್ರ ಧರಿಸುತ್ತೇನೆ ಎಂದರು.

ಟ್ರೋಲ್​ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅನನ್ಯಾ ನಾನು ಯಾವ ರೀತಿಯ ಬಟ್ಟೆ ಧರಿಸಿದರೂ ಟೀಕೆಗೆ ಒಳಗಾಗುತ್ತೇನೆ ಎಂಬ ವಿಚಾರ ಗೊತ್ತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ಬಟ್ಟೆಯ ಬಗ್ಗೆ ಅನೇಕರು ಪ್ರಶ್ನೆ ಮಾಡುತ್ತಾರೆ. ಆದರೆ, ನನಗೆ ಆ ಬಗ್ಗೆ ಚಿಂತೆ ಇಲ್ಲ. ನಾನು ಎಲ್ಲಿಯವರೆಗೆ ಖುಷಿಯಾಗಿರುತ್ತೇನೋ ಅಲ್ಲಿಯವರೆಗೆ ಇನ್​ಸ್ಟಾಗ್ರಾಂಗೆ ಫೋಟೋಗಳನ್ನು ಹಾಕುತ್ತಲೇ ಇರುತ್ತೇನೆ ಎಂದು ಹೇಳಿದರು. ಈ ಮೂಲಕ ಟ್ರೋಲ್​ಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.

ಅನನ್ಯಾ ಪಾಂಡೆ ಇನ್​ಸ್ಟಾಗ್ರಾಂನಲ್ಲಿ ಹಾಕಿರುವ ಫೋಟೋಗಳಿಗೆ ಅನೇಕರು ಕೆಟ್ಟದಾಗಿ ಕಮೆಂಟ್​ ಹಾಕಿದ್ದರು. ಅವರು ತೊಡುವ ಉಡುಗೆ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಇನ್ನು, ಸಿನಿಮಾ ವಿಚಾರಕ್ಕೆ ಬರುವುದಾದರೆ ಅನನ್ಯಾ ಪಾಂಡೆ, ಶಕುನ್​ ಭತ್ರಾ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ, ದೀಪಿಕಾ ಪಡುಕೋಣೆ ಹಾಗೂ ಸಿದ್ಧಾರ್ಥ್​ ಚತುರ್ವೇದಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

View this post on Instagram

A post shared by Diet Sabya (@dietsabya)

ಬಾಲಿವುಡ್​ ನಟಿ ರಾಕುಲ್ ಪ್ರೀತ್ ಸಿಂಗ್​ನ ಮಾಲ್ಡೀವ್ಸ್ ಡೇಸ್..

Follow Us
Skanda
Skanda
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು