Assembly Polls: ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ 52 ಸೀಟು ಗೆಲ್ಲುವುದು ಸಾಧ್ಯವಾದರೆ ಅದೇ ಸಾಧನೆ: ಡಾ ಸಿಎನ್ ಅಶ್ವಥ್ ನಾರಾಯಣ, ಸಚಿವರು

ಅರುಣ್​ ಕುಮಾರ್​ ಬೆಳ್ಳಿ

Updated on: Jan 23, 2023 | 4:14 PM

ಒಂದೇ ಸೀಟಿನಲ್ಲಿ ಕೂತಿದ್ದರು ಅಂತ ಪತ್ರಕರ್ತರೊಬ್ಬರು ಕೇಳಿದಾಗ ಸಚಿವರು ಒಬ್ಬರ ಮೇಲೊಬ್ಬರು ಕುಳಿತಿದ್ರಾ ಅಂತ ಕೇಳುತ್ತಾರೆ!

ಬೆಳಗಾವಿ:  ನಮ್ಮ ರಾಜಕಾರಣಿಗಳು ಎದುರಾಳಿಗಳನ್ನು ಟೀಕಿಸುವಾಗ, ಖಂಡಿಸುವಾಗ ಕೆಲವು ಸಲ ಹಗುರವಾಗಿ ಮಾತಾಡಿಬಿಡುತ್ತಾರೆ. ಈ ಮಾತು ಎಲ್ಲ ಪಕ್ಷಗಳ ನಾಯಕರಿಗೆ ಅನ್ವಯಿಸುತ್ತದೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಡನೆ ಮಾತಾಡುವಾಗ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರು ಅಂಥ ಪ್ರವೃತ್ತಿಯನ್ನು ಪ್ರದರ್ಶಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಒಂದೇ ಸೀಟಿನಲ್ಲಿ ಕೂತಿದ್ದರು ಅಂತ ಪತ್ರಕರ್ತರೊಬ್ಬರು ಕೇಳಿದಾಗ ಸಚಿವರು ಒಬ್ಬರ ಮೇಲೊಬ್ಬರು ಕುಳಿತಿದ್ರಾ ಅಂತ ಕೇಳುತ್ತಾರೆ! ನಂತರ, ತನ್ನ ಮಾತಿಗೆ ಯಾರೂ ನಗಲಿಲ್ಲ ಅಂತ ಗೊತ್ತಾದ ಕೂಡಲೇ, ಅಕ್ಕಪಕ್ಕ ಕುಳಿತಿದ್ರಾ ಅಂತ ಹೇಳಿ ಪೆಚ್ಚುನಗೆ ಬೀರುತ್ತಾರೆ. ಮುಂದುವರಿದು ಮಾತಾಡುವ ಅವರು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 52 ಸೀಟು ಗೆದ್ದರೆ ದೊಡ್ಡದು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 23, 2023 04:12 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.