AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ […]

ನಾನು ಮತ್ತೆ CM ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ -ಸಿದ್ದರಾಮಯ್ಯ ಆಶಯ, ಭರವಸೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 20, 2020 | 2:13 PM

Share

ಬಾಗಲಕೋಟೆ: ನಾನು ಮತ್ತೆ ಸಿಎಂ ಆದರೆ ಬಡವರಿಗೆ 10 ಕೆಜಿ ಅಕ್ಕಿ ಕೊಡ್ತೀನಿ ಎಂದು ಕೆಂದೂರಿನಲ್ಲಿ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಬಾದಾಮಿ ಪ್ರವಾಸ ಕೈಗೊಂಡಿದ್ದಾರೆ. ಕೆರೂರಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದು, ಜನರಿಗೆ ಭರವಸೆ ನೀಡುವ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರು ಹೊಟ್ಟೆ ತುಂಬ ಊಟ ಮಾಡಬೇಕು. 7 ಕೆಜಿ ಅಕ್ಕಿ ಕೊಟ್ಟಿದ್ರೆ ಇವರಪ್ಪನ ಮನೆ ಗಂಟೇನು ಹೋಗ್ತಿತ್ತು? ನಾನು ಪುನಃ ಬಂದಿದ್ರೆ 10 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಸಭೆಯಲ್ಲಿ ಹೇಳುವಾಗ ಮುಂದಿನ ಸಲ ನೀವೆ ಬರ್ತಿರಿ ಆಗ ಕೊಡುವಿರಂತೆ ಸಾಹೇಬ್ರೆ ಅಂತ ಜನ ಕೂಗಾಡಿದ್ದಾರೆ. ಖಂಡಿತವಾಗಿಯೂ ಮಾಡ್ತೀನಿ.

ಒಂದು ವೇಳೆ ಮನಮೋಹನ ಸಿಂಗ್ ಅವರ ಕಾಲದಲ್ಲಿ ಎನ್.ಆರ್.ಇ.ಜಿ. ಇಲ್ದೆ ಹೋಗಿದ್ದರೆ.. ನಾನು ಅಕ್ಕಿ ಫ್ರಿಯಾಗಿ ಕೊಡದೇ ಹೋಗಿದ್ರೆ. ಈ ಕೊರೊನಾ ಸಮಯದಲ್ಲಿ ಎಷ್ಟು ಜನರು ಕಷ್ಟದಲ್ಲಿ ಸಿಕ್ಕಾಕಿ ಕೊಳ್ತಿದ್ರು? ಈ ಎರಡು ಕಾರ್ಯಕ್ರಮಗಳಿಂದ ಇವತ್ತು ಜನರು ಬದುಕಿದ್ದಾರೆ. ಹಳ್ಳಿಗಳಲ್ಲಿ ಕೆಲಸ ಸಿಗುತ್ತೆ, ಊಟ ಸಿಗುತ್ತೆ. ಬೆಂಗಳೂರು ಬಿಟ್ಟು ಬಹಳ ಜನರು ಊರಿಗೆ ಬಂದ್ಬಿಟ್ರು ಎಂದು ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!