AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಕತ್ತಿದ್ದರೆ ಅರೆಸ್ಟ್ ಮಾಡಿ, ಜೈಲಲ್ಲಿ ಇದ್ದುಕೊಂಡೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ; ಬಿಜೆಪಿಗೆ ದೀದಿ ಓಪನ್​ ಚಾಲೆಂಜ್

ನಾನಂತೂ ಬಿಜೆಪಿಗಾಗಲೀ, ಅದರ ಏಜೆನ್ಸಿಗಾಗಲೀ ಹೆದರುವುದಿಲ್ಲ, ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಬಿಜೆಪಿ ಪಕ್ಷಕ್ಕೆ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.

ತಾಕತ್ತಿದ್ದರೆ ಅರೆಸ್ಟ್ ಮಾಡಿ, ಜೈಲಲ್ಲಿ ಇದ್ದುಕೊಂಡೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ; ಬಿಜೆಪಿಗೆ ದೀದಿ ಓಪನ್​ ಚಾಲೆಂಜ್
ಮಮತಾ ಬ್ಯಾನರ್ಜಿ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Nov 25, 2020 | 6:30 PM

Share

ಕೋಲ್ಕತ್ತ: ಬಿಜೆಪಿ ವಿರುದ್ಧ ಸದಾ ಕಿಡಿಕಾರುವ ಮಮತಾ ಬ್ಯಾನರ್ಜಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪಕ್ಷವನ್ನು ಸುಳ್ಳುಗಳ ತ್ಯಾಜ್ಯ ಎಂದು ಕರೆದಿರುವ ದೀದಿ, ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಸವಾಲು ಹಾಕಿದ್ದಾರೆ.

2021ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಬಂಕುರಾದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ಈ ದೇಶಕ್ಕೆ ಅಂಟಿದ ಶಾಪ. ಅವರಿಗೆ ಧೈರ್ಯವಿದ್ದರೆ ನನ್ನನ್ನು ಬಂಧಿಸಲಿ. ಜೈಲಿನಲ್ಲಿ ಇದ್ದುಕೊಂಡೇ 2021ರ ಚುನಾವಣೆಯಲ್ಲಿ ನಮ್ಮ ತೃಣಮೂಲ ಕಾಂಗ್ರೆಸ್​ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಚುನಾವಣೆ ಬಂದ ಕೂಡಲೇ ಬಿಜೆಪಿ ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್​ ಹಗರಣದ ಬಗ್ಗೆ ಮಾತನಾಡುತ್ತಾರೆ. ಇಲ್ಲಸಲ್ಲದ ಸುಳ್ಳುಗಳನ್ನು ಜನರೆದುರು ಹೇಳುತ್ತಾರೆ.  ಆದರೆ ನಾನಂತೂ ಬಿಜೆಪಿಗಾಗಲೀ, ಅದರ ಏಜೆನ್ಸಿಗಾಗಲೀ ಹೆದರುವುದಿಲ್ಲ. ಬಿಹಾರದಲ್ಲಿ ಲಾಲೂಪ್ರಸಾದ್ ಯಾದವ್​ರನ್ನು ಜೈಲಿಗೆ ಹಾಕಿದ್ದರೂ, ಅವರ ಪಕ್ಷ ಸಮರ್ಥವಾಗಿಯೇ ಮುನ್ನಡೆಯುತ್ತಿದೆ. ಬಿಹಾರದಲ್ಲಿ ಬಿಜೆಪಿ ಯಾವತ್ತೂ ಜನಾದೇಶದಿಂದ ಅಧಿಕಾರ ಹಿಡಿದಿಲ್ಲ. ಬದಲಿಗೆ ಮೋಸ, ವಂಚನೆಯಿಂದಲೇ ಸರ್ಕಾರ ರಚಿಸುತ್ತಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಅದು ಸಾಧ್ಯವಿಲ್ಲ. 2021ರ ವಿಧಾನಸಭಾ ಚುನಾವಣೆಯಲ್ಲೂ ಟಿಎಂಸಿ ಪ್ರಚಂಡ ಬಹುಮತದಿಂದಲೇ ಅಧಿಕಾರ ಹಿಡಿಯಲಿದೆ ಎಂದು ಹೇಳಿದರು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು