Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

ರಮೇಶ್ ಜಾರಕಿಹೊಳಿಯವರ ವಿಡಿಯೋ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತ ಯುವತಿ ಇದಕ್ಕೆ ಸಹಮತ ಇದೆ ಎಂದು ಹೇಳಿದ್ರೆ ನನಗೆ ಮಾಹಿತಿ ನೀಡಿದವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆಂದು ಹೇಳಿದ್ದಾರೆ.

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ
ದಿನೇಶ್ ಕಲ್ಲಹಳ್ಳಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Mar 04, 2021 | 2:45 PM

ಬೆಂಗಳೂರು: ರಮೇಶ್ ಜಾರಕಿಕೊಳಿ ಪಟ್ಟು ಹಿಡಿದು ಮಂತ್ರಿಗಿರಿ ಪಡೆದಿದ್ರು.. ಸರ್ಕಾರವನ್ನೇ ಕೆಡವಿ ಸ್ಥಾನಮಾನ ದಕ್ಕಿಸಿಕೊಂಡಿದ್ರು.. ಆದ್ರೆ, ಒಂದೇ ಒಂದು ವಿಡಿಯೋ  ಅವರನ್ನು ನೆಲಕ್ಕೆ ಕೆಡವಿಬಿಟ್ಟಿದೆ. ಮಂತ್ರಿ ಆಗಿದ್ದವ್ರು, ಈಗ ಮಾಜಿ ಆಗಿದ್ದಾರೆ, ಸಿಕ್ಕ ಸಿಕ್ಕವ್ರಿಗೆ ಆಹಾರ ಆಗಿದ್ದಾರೆ. ಸೆಕ್ಸ್ ಸಿಡಿ ಬಿಡುಗಡೆಯಾದ ಕೇವಲ 20 ಗಂಟೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.  ಇದರ ನಡುವೆ ರಮೇಶ್ ಜಾರಕಿಹೊಳಿಯವರ ವಿಡಿಯೋ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತ ಯುವತಿ ತಮ್ಮದು  ಸಹಮತ ಸೆಕ್ಸ್​​ ಎಂದು ಹೇಳಿದ್ರೆ, ಆವಾಗ ನನಗೆ ಮಾಹಿತಿ ನೀಡಿದವರ ವಿರುದ್ಧವೇ ನಾನು ಕಾನೂನು ಹೋರಾಟ ನಡೆಸುತ್ತೇನೆಂದು ಹೇಳಿದ್ದಾರೆ.

ಇದೂವರೆಗೂ ರಾಸಲೀಲೆಯಲ್ಲಿದ್ದ ಯುವತಿ ನನಗೆ ಅನ್ಯಾಯವಾಗಿದೆ ಎಂದು ಎಲ್ಲೂ ಹೇಳಿಲ್ಲ. ಅವರನ್ನ ನಾನು ಭೇಟಿಯಾಗಿಲ್ಲ. ಒಂದೊಮ್ಮೆ ಯುವತಿ ರಾಸಲೀಲೆ ಮಾಡಿರೋದಕ್ಕೆ ನನ್ನ ಒಪ್ಪಿಗೆ ಇತ್ತು. ಪರಸ್ಪರ ಒಪ್ಪಿಗೆಯಿಂದ ಆಗಿರುವ ಲೈಂಗಿಕ ಕ್ರಿಯೆ ಅಂತಾ ಒಪ್ಪಿಕೊಂಡರೇ.. ಆಗ ನಾನು ನನಗೆ ಮಾಹಿತಿ ನೀಡಿದ ಸಂತ್ರಸ್ತೆಯ ಕುಟುಂಬಸ್ಥರ ವಿರುದ್ಧ ಕಾನೂನು ಹೋರಾಟ ಮಾಡ್ತೇನೆ ಎಂದು ಟಿವಿ9ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದು ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಕಾನೂನು ಹೋರಾಟಕ್ಕೆ ಬೇಕಾದ ಸಕಲ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಸಂತ್ರಸ್ತೆ ಅಥವಾ ಸಂತ್ರಸ್ತೆ ಕುಟುಂಬಸ್ಥರನ್ನ ಮಾಧ್ಯಮಗಳ ಮುಂದೆ ತರಲು ದಿನೇಶ್ ಕಲ್ಲಹಳ್ಳಿ ಪ್ರಯತ್ನಿಸುತ್ತಿದ್ದಾರೆ. ಮಾಹಿತಿ ನೀಡಿದ ವ್ಯಕ್ತಿ ಈವರೆಗೂ ದಿನೇಶ್​ಗೆ ಕರೆ ಮಾಡಿಲ್ಲ. ಹೀಗಾಗಿ ಪೊಲೀಸರ ವಿಚಾರಣೆಗೆ ಸಹಕಾರಿಯಾಗುವಂತೆ, ಆತನ‌ ಮೂಲಕ ವಿಚಾರಣೆಗೆ ಬಲ ತುಂಬಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗಗೊಳಿಸಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ಪಾರ್ಕ್​ ಠಾಣೆಯಲ್ಲಿ ದೂರು ದಾಖಲಿಸಿದ ಪುಟ್ಟೇಗೌಡ

Published On - 2:30 pm, Thu, 4 March 21

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!