AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ

ರಮೇಶ್ ಜಾರಕಿಹೊಳಿಯವರ ವಿಡಿಯೋ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತ ಯುವತಿ ಇದಕ್ಕೆ ಸಹಮತ ಇದೆ ಎಂದು ಹೇಳಿದ್ರೆ ನನಗೆ ಮಾಹಿತಿ ನೀಡಿದವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆಂದು ಹೇಳಿದ್ದಾರೆ.

ಸಂತ್ರಸ್ತ ಯುವತಿ ತಮ್ಮದು ಸಹಮತ ಸೆಕ್ಸ್​ ಎಂದು ಹೇಳಿದರೆ.. ನಾನು ಕಾನೂನು ಹೋರಾಟ ನಡೆಸುತ್ತೇನೆ -ದಿನೇಶ್ ಕಲ್ಲಹಳ್ಳಿ
ದಿನೇಶ್ ಕಲ್ಲಹಳ್ಳಿ
ಆಯೇಷಾ ಬಾನು
| Edited By: |

Updated on:Mar 04, 2021 | 2:45 PM

Share

ಬೆಂಗಳೂರು: ರಮೇಶ್ ಜಾರಕಿಕೊಳಿ ಪಟ್ಟು ಹಿಡಿದು ಮಂತ್ರಿಗಿರಿ ಪಡೆದಿದ್ರು.. ಸರ್ಕಾರವನ್ನೇ ಕೆಡವಿ ಸ್ಥಾನಮಾನ ದಕ್ಕಿಸಿಕೊಂಡಿದ್ರು.. ಆದ್ರೆ, ಒಂದೇ ಒಂದು ವಿಡಿಯೋ  ಅವರನ್ನು ನೆಲಕ್ಕೆ ಕೆಡವಿಬಿಟ್ಟಿದೆ. ಮಂತ್ರಿ ಆಗಿದ್ದವ್ರು, ಈಗ ಮಾಜಿ ಆಗಿದ್ದಾರೆ, ಸಿಕ್ಕ ಸಿಕ್ಕವ್ರಿಗೆ ಆಹಾರ ಆಗಿದ್ದಾರೆ. ಸೆಕ್ಸ್ ಸಿಡಿ ಬಿಡುಗಡೆಯಾದ ಕೇವಲ 20 ಗಂಟೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.  ಇದರ ನಡುವೆ ರಮೇಶ್ ಜಾರಕಿಹೊಳಿಯವರ ವಿಡಿಯೋ ಬಿಡುಗಡೆ ಮಾಡಿದ್ದ ದಿನೇಶ್ ಕಲ್ಲಹಳ್ಳಿ, ಸಂತ್ರಸ್ತ ಯುವತಿ ತಮ್ಮದು  ಸಹಮತ ಸೆಕ್ಸ್​​ ಎಂದು ಹೇಳಿದ್ರೆ, ಆವಾಗ ನನಗೆ ಮಾಹಿತಿ ನೀಡಿದವರ ವಿರುದ್ಧವೇ ನಾನು ಕಾನೂನು ಹೋರಾಟ ನಡೆಸುತ್ತೇನೆಂದು ಹೇಳಿದ್ದಾರೆ.

ಇದೂವರೆಗೂ ರಾಸಲೀಲೆಯಲ್ಲಿದ್ದ ಯುವತಿ ನನಗೆ ಅನ್ಯಾಯವಾಗಿದೆ ಎಂದು ಎಲ್ಲೂ ಹೇಳಿಲ್ಲ. ಅವರನ್ನ ನಾನು ಭೇಟಿಯಾಗಿಲ್ಲ. ಒಂದೊಮ್ಮೆ ಯುವತಿ ರಾಸಲೀಲೆ ಮಾಡಿರೋದಕ್ಕೆ ನನ್ನ ಒಪ್ಪಿಗೆ ಇತ್ತು. ಪರಸ್ಪರ ಒಪ್ಪಿಗೆಯಿಂದ ಆಗಿರುವ ಲೈಂಗಿಕ ಕ್ರಿಯೆ ಅಂತಾ ಒಪ್ಪಿಕೊಂಡರೇ.. ಆಗ ನಾನು ನನಗೆ ಮಾಹಿತಿ ನೀಡಿದ ಸಂತ್ರಸ್ತೆಯ ಕುಟುಂಬಸ್ಥರ ವಿರುದ್ಧ ಕಾನೂನು ಹೋರಾಟ ಮಾಡ್ತೇನೆ ಎಂದು ಟಿವಿ9ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದು ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಕಾನೂನು ಹೋರಾಟಕ್ಕೆ ಬೇಕಾದ ಸಕಲ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಸಂತ್ರಸ್ತೆ ಅಥವಾ ಸಂತ್ರಸ್ತೆ ಕುಟುಂಬಸ್ಥರನ್ನ ಮಾಧ್ಯಮಗಳ ಮುಂದೆ ತರಲು ದಿನೇಶ್ ಕಲ್ಲಹಳ್ಳಿ ಪ್ರಯತ್ನಿಸುತ್ತಿದ್ದಾರೆ. ಮಾಹಿತಿ ನೀಡಿದ ವ್ಯಕ್ತಿ ಈವರೆಗೂ ದಿನೇಶ್​ಗೆ ಕರೆ ಮಾಡಿಲ್ಲ. ಹೀಗಾಗಿ ಪೊಲೀಸರ ವಿಚಾರಣೆಗೆ ಸಹಕಾರಿಯಾಗುವಂತೆ, ಆತನ‌ ಮೂಲಕ ವಿಚಾರಣೆಗೆ ಬಲ ತುಂಬಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಬಹಿರಂಗಗೊಳಿಸಿದ ದಿನೇಶ್​ ಕಲ್ಲಹಳ್ಳಿ ವಿರುದ್ಧ ಕಬ್ಬನ್​ಪಾರ್ಕ್​ ಠಾಣೆಯಲ್ಲಿ ದೂರು ದಾಖಲಿಸಿದ ಪುಟ್ಟೇಗೌಡ

Published On - 2:30 pm, Thu, 4 March 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್