AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು

ಒಂದ್ಕಡೆ ರಾಜ್ಯದಲ್ಲಿ ರಾಜಕೀಯ ಚರ್ಚೆಗಳು ಗರಿಗೆದರಿದ್ದಾಗ ಮತ್ತೊಂದ್ಕಡೆ ಪ್ರತಿಷ್ಠಿತ ಇಂಡಿಯನ್ ಇನ್ಸ್​ಟಿಟ್ಯೂಟ್‌ ಆಫ್ ಸೈನ್ಸ್ ಪಾಲಿಗೆ ಕರಾಳ ದಿನ ಎದುರಾಗಿತ್ತು. ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಡೀ ಕ್ಯಾಂಪಸ್ ಪಾಲಿಗೆ ಬ್ಲ್ಯಾಕ್ ಡೇ ಆಗಿತ್ತು.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು
ಐಐಎಸ್​ಸಿ ಕ್ಯಾಂಪಸ್
ಆಯೇಷಾ ಬಾನು
|

Updated on:Mar 09, 2021 | 10:55 AM

Share

ಅದು ಪ್ರತಿಷ್ಠಿತ ವಿದ್ಯಾಸಂಸ್ಥೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡಿರುವ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಆದರೆ ಆ ಸಂಸ್ಥೆಯ ನೆಮ್ಮದಿ ಹಾರಿಹೋಗಿತ್ತು. ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು ಹೌದು ಐಐಎಸ್​ಸಿ ಕ್ಯಾಂಪಸ್​ನಲ್ಲಿ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ನ್ಯಾನೋ ವಿಜ್ಞಾನ ಹಾಗೂ ಇಂಜಿನಿಯರಿಂಗ್​ನಲ್ಲಿ ಪಿಹೆಚ್​ಡಿ ಮಾಡ್ತ್ತಿದ್ದ ರಣಧೀರ ಕುಮಾರ್ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು​ ಆತ್ಮಹತ್ಯೆ ಮಾಡಿಕೊಂಡರೆ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ಟೆಕ್ ವಿದ್ಯಾರ್ಥಿ ರಾಹುಲ್ ಪ್ರತಾಪ್ ಮೈದಾನದಲ್ಲಿ ಫುಟ್ಬಾಲ್ ಆಡುವಾಗ ಎಚ್ಚರ ತಪ್ಪಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ಆತ್ಮಹತ್ಯೆಗೆ ಶರಣಾದ ರಣಧೀರ್ ಮಾರ್ಚ್ 2 ರಂದು ಮಂಗಳವಾರ ಸಂಜೆವರೆಗೂ ರೂಂ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಉಳಿದ ವಿದ್ಯಾರ್ಥಿಗಳು ರಕ್ಷಣಾ ಸಿಬ್ಬಂದಿಗೆ ವಿಷಯ ತಿಳಿಸಿದ್ರು. ಸಿಬ್ಬಂದಿ ಬಾಗಿಲನ್ನು ತೆಗೆದಾಗ ರಣಧೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ‌ ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇತ್ತ ರಾಹುಲ್ ಪ್ರತಾಪ್ ಸಹ ಎಂದಿನಂತೆ ಫುಟ್ಬಾಲ್ ಆಡ್ತಿದ್ದವನು ಏಕಾಏಕಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರಾದ್ರೂ ಪ್ರತಾಪ್ ಬದುಕುಳಿದಿಲ್ಲ.

ಘಟನೆಯ ಬಗ್ಗೆ ಐಐಎಸ್​ಸಿ ಉನ್ನತಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರು, ಸ್ನೇಹಿತರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಐಐಎಸ್​ಸಿ ವಿದ್ಯಾರ್ಥಿಗಳು ಸಮಸ್ಯೆ ಇದ್ದರೆ ಐಐಎಸ್​ಸಿ ಸೌಕರ್ಯ ಬಳಸಿಕೊಂಡು ಸಹಾಯ ಪಡೆಯಬೇಕೆಂದು ಸೂಚಿಸಿದ್ದಾರೆ. ಒಟ್ನಲ್ಲಿ‌ ಇನ್ನೇನು ಪದವಿ ಹೊಸ್ತಿಲಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳ ಅಂತ್ಯ ಇಡೀ ಕ್ಯಾಂಪಸ್ ಪಾಲಿಗೆ ನೋವಿನ ಸಂಗತಿಯಾಗಿದೆ.

ಇದನ್ನೂ ಓದಿ: ಎಕ್ಸಾಂ ಗೊಂದಲ? ವಿ.ವಿ.ಪುರಂ ಬಿಐಟಿ ಕಾಲೇಜು ಕಟ್ಟಡದಿಂದ ಜಿಗಿದು ರ‍್ಯಾಂಕ್ ವಿದ್ಯಾರ್ಥಿ ಸಾವು

Published On - 7:13 am, Thu, 4 March 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!