AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು

ಒಂದ್ಕಡೆ ರಾಜ್ಯದಲ್ಲಿ ರಾಜಕೀಯ ಚರ್ಚೆಗಳು ಗರಿಗೆದರಿದ್ದಾಗ ಮತ್ತೊಂದ್ಕಡೆ ಪ್ರತಿಷ್ಠಿತ ಇಂಡಿಯನ್ ಇನ್ಸ್​ಟಿಟ್ಯೂಟ್‌ ಆಫ್ ಸೈನ್ಸ್ ಪಾಲಿಗೆ ಕರಾಳ ದಿನ ಎದುರಾಗಿತ್ತು. ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಡೀ ಕ್ಯಾಂಪಸ್ ಪಾಲಿಗೆ ಬ್ಲ್ಯಾಕ್ ಡೇ ಆಗಿತ್ತು.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು
ಐಐಎಸ್​ಸಿ ಕ್ಯಾಂಪಸ್
Follow us
ಆಯೇಷಾ ಬಾನು
|

Updated on:Mar 09, 2021 | 10:55 AM

ಅದು ಪ್ರತಿಷ್ಠಿತ ವಿದ್ಯಾಸಂಸ್ಥೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡಿರುವ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಆದರೆ ಆ ಸಂಸ್ಥೆಯ ನೆಮ್ಮದಿ ಹಾರಿಹೋಗಿತ್ತು. ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು ಹೌದು ಐಐಎಸ್​ಸಿ ಕ್ಯಾಂಪಸ್​ನಲ್ಲಿ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ನ್ಯಾನೋ ವಿಜ್ಞಾನ ಹಾಗೂ ಇಂಜಿನಿಯರಿಂಗ್​ನಲ್ಲಿ ಪಿಹೆಚ್​ಡಿ ಮಾಡ್ತ್ತಿದ್ದ ರಣಧೀರ ಕುಮಾರ್ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು​ ಆತ್ಮಹತ್ಯೆ ಮಾಡಿಕೊಂಡರೆ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ಟೆಕ್ ವಿದ್ಯಾರ್ಥಿ ರಾಹುಲ್ ಪ್ರತಾಪ್ ಮೈದಾನದಲ್ಲಿ ಫುಟ್ಬಾಲ್ ಆಡುವಾಗ ಎಚ್ಚರ ತಪ್ಪಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ಆತ್ಮಹತ್ಯೆಗೆ ಶರಣಾದ ರಣಧೀರ್ ಮಾರ್ಚ್ 2 ರಂದು ಮಂಗಳವಾರ ಸಂಜೆವರೆಗೂ ರೂಂ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಉಳಿದ ವಿದ್ಯಾರ್ಥಿಗಳು ರಕ್ಷಣಾ ಸಿಬ್ಬಂದಿಗೆ ವಿಷಯ ತಿಳಿಸಿದ್ರು. ಸಿಬ್ಬಂದಿ ಬಾಗಿಲನ್ನು ತೆಗೆದಾಗ ರಣಧೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ‌ ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇತ್ತ ರಾಹುಲ್ ಪ್ರತಾಪ್ ಸಹ ಎಂದಿನಂತೆ ಫುಟ್ಬಾಲ್ ಆಡ್ತಿದ್ದವನು ಏಕಾಏಕಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರಾದ್ರೂ ಪ್ರತಾಪ್ ಬದುಕುಳಿದಿಲ್ಲ.

ಘಟನೆಯ ಬಗ್ಗೆ ಐಐಎಸ್​ಸಿ ಉನ್ನತಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರು, ಸ್ನೇಹಿತರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಐಐಎಸ್​ಸಿ ವಿದ್ಯಾರ್ಥಿಗಳು ಸಮಸ್ಯೆ ಇದ್ದರೆ ಐಐಎಸ್​ಸಿ ಸೌಕರ್ಯ ಬಳಸಿಕೊಂಡು ಸಹಾಯ ಪಡೆಯಬೇಕೆಂದು ಸೂಚಿಸಿದ್ದಾರೆ. ಒಟ್ನಲ್ಲಿ‌ ಇನ್ನೇನು ಪದವಿ ಹೊಸ್ತಿಲಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳ ಅಂತ್ಯ ಇಡೀ ಕ್ಯಾಂಪಸ್ ಪಾಲಿಗೆ ನೋವಿನ ಸಂಗತಿಯಾಗಿದೆ.

ಇದನ್ನೂ ಓದಿ: ಎಕ್ಸಾಂ ಗೊಂದಲ? ವಿ.ವಿ.ಪುರಂ ಬಿಐಟಿ ಕಾಲೇಜು ಕಟ್ಟಡದಿಂದ ಜಿಗಿದು ರ‍್ಯಾಂಕ್ ವಿದ್ಯಾರ್ಥಿ ಸಾವು

Published On - 7:13 am, Thu, 4 March 21

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ