AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು

ಒಂದ್ಕಡೆ ರಾಜ್ಯದಲ್ಲಿ ರಾಜಕೀಯ ಚರ್ಚೆಗಳು ಗರಿಗೆದರಿದ್ದಾಗ ಮತ್ತೊಂದ್ಕಡೆ ಪ್ರತಿಷ್ಠಿತ ಇಂಡಿಯನ್ ಇನ್ಸ್​ಟಿಟ್ಯೂಟ್‌ ಆಫ್ ಸೈನ್ಸ್ ಪಾಲಿಗೆ ಕರಾಳ ದಿನ ಎದುರಾಗಿತ್ತು. ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಡೀ ಕ್ಯಾಂಪಸ್ ಪಾಲಿಗೆ ಬ್ಲ್ಯಾಕ್ ಡೇ ಆಗಿತ್ತು.

ಬೆಂಗಳೂರು IISC ಸಂಸ್ಥೆಯಲ್ಲಿ ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು
ಐಐಎಸ್​ಸಿ ಕ್ಯಾಂಪಸ್
ಆಯೇಷಾ ಬಾನು
|

Updated on:Mar 09, 2021 | 10:55 AM

Share

ಅದು ಪ್ರತಿಷ್ಠಿತ ವಿದ್ಯಾಸಂಸ್ಥೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡಿರುವ ನಮ್ಮ ದೇಶದ ಹೆಮ್ಮೆಯ ಪ್ರತೀಕ. ಆದರೆ ಆ ಸಂಸ್ಥೆಯ ನೆಮ್ಮದಿ ಹಾರಿಹೋಗಿತ್ತು. ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಒಂದೇ ದಿನ ಇಬ್ಬರು ವಿದ್ಯಾರ್ಥಿಗಳ ಸಾವು ಹೌದು ಐಐಎಸ್​ಸಿ ಕ್ಯಾಂಪಸ್​ನಲ್ಲಿ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ನ್ಯಾನೋ ವಿಜ್ಞಾನ ಹಾಗೂ ಇಂಜಿನಿಯರಿಂಗ್​ನಲ್ಲಿ ಪಿಹೆಚ್​ಡಿ ಮಾಡ್ತ್ತಿದ್ದ ರಣಧೀರ ಕುಮಾರ್ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು​ ಆತ್ಮಹತ್ಯೆ ಮಾಡಿಕೊಂಡರೆ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ಟೆಕ್ ವಿದ್ಯಾರ್ಥಿ ರಾಹುಲ್ ಪ್ರತಾಪ್ ಮೈದಾನದಲ್ಲಿ ಫುಟ್ಬಾಲ್ ಆಡುವಾಗ ಎಚ್ಚರ ತಪ್ಪಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ಆತ್ಮಹತ್ಯೆಗೆ ಶರಣಾದ ರಣಧೀರ್ ಮಾರ್ಚ್ 2 ರಂದು ಮಂಗಳವಾರ ಸಂಜೆವರೆಗೂ ರೂಂ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಉಳಿದ ವಿದ್ಯಾರ್ಥಿಗಳು ರಕ್ಷಣಾ ಸಿಬ್ಬಂದಿಗೆ ವಿಷಯ ತಿಳಿಸಿದ್ರು. ಸಿಬ್ಬಂದಿ ಬಾಗಿಲನ್ನು ತೆಗೆದಾಗ ರಣಧೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ‌ ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇತ್ತ ರಾಹುಲ್ ಪ್ರತಾಪ್ ಸಹ ಎಂದಿನಂತೆ ಫುಟ್ಬಾಲ್ ಆಡ್ತಿದ್ದವನು ಏಕಾಏಕಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರಾದ್ರೂ ಪ್ರತಾಪ್ ಬದುಕುಳಿದಿಲ್ಲ.

ಘಟನೆಯ ಬಗ್ಗೆ ಐಐಎಸ್​ಸಿ ಉನ್ನತಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರು, ಸ್ನೇಹಿತರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಐಐಎಸ್​ಸಿ ವಿದ್ಯಾರ್ಥಿಗಳು ಸಮಸ್ಯೆ ಇದ್ದರೆ ಐಐಎಸ್​ಸಿ ಸೌಕರ್ಯ ಬಳಸಿಕೊಂಡು ಸಹಾಯ ಪಡೆಯಬೇಕೆಂದು ಸೂಚಿಸಿದ್ದಾರೆ. ಒಟ್ನಲ್ಲಿ‌ ಇನ್ನೇನು ಪದವಿ ಹೊಸ್ತಿಲಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳ ಅಂತ್ಯ ಇಡೀ ಕ್ಯಾಂಪಸ್ ಪಾಲಿಗೆ ನೋವಿನ ಸಂಗತಿಯಾಗಿದೆ.

ಇದನ್ನೂ ಓದಿ: ಎಕ್ಸಾಂ ಗೊಂದಲ? ವಿ.ವಿ.ಪುರಂ ಬಿಐಟಿ ಕಾಲೇಜು ಕಟ್ಟಡದಿಂದ ಜಿಗಿದು ರ‍್ಯಾಂಕ್ ವಿದ್ಯಾರ್ಥಿ ಸಾವು

Published On - 7:13 am, Thu, 4 March 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್