ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ. ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ […]

ಡಾ. ಸುದರ್ಶನ್​ಗೆ ಬಿಗ್ ಶಾಕ್: ಬಿಳಿಗಿರಿ ಬೆಟ್ಟದ ಅಕ್ರಮ ರೆಸಾರ್ಟ್ ಬಂದ್​
ಸಾಧು ಶ್ರೀನಾಥ್​

Updated on: Jan 04, 2020 | 2:25 PM

ಚಾಮರಾಜನಗರ: ಬಿಳಿಗಿರಿ ರಂಗನ ಬೆಟ್ಟದಲ್ಲಿ ಗೊರುಕಾನ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರದ ಹೆಸರಿನಲ್ಲಿ ಜಂಗಲ್ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ರೈಟ್ ಲೈವ್ಲಿ ಹುಡ್ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ್ ಅವರಿಂದ 8 ಎಕರೆ ಭೂ ಪರಿವರ್ತನೆ ಮಾಡಿಸಿ ಐಶಾರಾಮಿಯಾಗಿ ರೆಸಾರ್ಟ್ ನಿರ್ಮಿಸಿದ್ದರು. ಇದೀಗ ಜಿಲ್ಲಾ ಮ್ಯಾಜಿಸ್ಟ್ರೇಟ್​ನ ಬಿ.ಬಿ. ಕಾವೇರಿ ಅವರು ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿದ್ದಾರೆ.

ಡಾ. ಸುದರ್ಶ ನ್​ಗೆ ಬಿಗ್ ಶಾಕ್ ಕೊಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್
ಬಿಆರ್​ಟಿ ಟೈಗರ್ ರಿಸರ್ವ್​ನ ಪರಿಸರ ಸೂಕ್ಷ್ಮ ವಲಯದಲ್ಲಿ ರೆಸಾರ್ಟ್ ನಿರ್ಮಾಣ ಮಾಡಲಾಗಿದೆ. ಶಿಕ್ಷಣ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡು ಉದ್ದೇಶ ಮರೆಮಾಚಿದ ಆರೋಪವಿತ್ತು. ಈ ಕುರಿತು ತನಿಖಾ ತಂಡ ವರದಿ ನೀಡಿತ್ತು. ಭೂ ಪರಿವರ್ತನೆ ಆದೇಶ ದುರ್ಬಳಕೆ ಮಾಡಿಕೊಂಡು ವಾಣಿಜ್ಯ ಚಟುವಟಿಕೆಗೆ ರೆಸಾರ್ಟ್​ ಬಳಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಭೂ ಪರಿವರ್ತನಾ ಆದೇಶವನ್ನು ರದ್ದುಗೊಳಿಸಲಾಗಿದೆ.

Published On - 2:20 pm, Sat, 4 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us