AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜ್ರಾ ನದಿಯ ಒಡಲನ್ನೇ ಬಗೆದು ಅಕ್ರಮ ಮರಳು ದಂಧೆ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬೀದರ್: ಕರ್ನಾಟಕ ಮತ್ತು ಆಂಧ್ರ ಪ್ರದೇಶ ಎರಡೂ ರಾಜ್ಯಗಳಿಗೆ ವರದಾನವಾಗಿರುವ ಬೀದರ್​ನ ಮಾಂಜ್ರಾ ನದಿಯ ಒಡಲನ್ನ ಅಕ್ರಮ ಮರುಳು ಧಂದೆ ಕೋರರು ಕೈಹಾಕಿದ್ದಾರೆ. ಮಳೆ ಕೈಕೊಟ್ಟಿದ್ದರಿಂದ ಮಾಂಜ್ರಾ ನದಿ ಬತ್ತಿಹೋಗಿದ್ದು, ಇದನ್ನ ಬಂಡವಾಳ ಮಾಡಿಕೊಂಡು ಅಗಲು ರಾತ್ರಿ ಎನ್ನದೇ ಮರಳನ್ನ ಸಾಗಿಸಲಾಗುತ್ತಿದೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆಯ ಹಿಂದೆ ಪೊಲೀಸರು ಕೂಡಾ ಕೈ ಜೋಡಿಸಿದ್ದು, ಯಾರ ಭಯವಿಲ್ಲದೆ ಮರಳನ್ನ ಮಾರಾಟಮಾಡಲಾಗುತ್ತಿದೆ. ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನ ಬಳಸಿ ಮರಳು ಲೂಟಿ ತುಂಬಿಕೊಂಡು ಪೋಲೀಸ್ ಠಾಣೆಯ ಎದುರುಗಡೆಯೇ […]

ಮಾಂಜ್ರಾ ನದಿಯ ಒಡಲನ್ನೇ ಬಗೆದು ಅಕ್ರಮ ಮರಳು ದಂಧೆ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:May 29, 2020 | 1:10 PM

Share

ಬೀದರ್: ಕರ್ನಾಟಕ ಮತ್ತು ಆಂಧ್ರ ಪ್ರದೇಶ ಎರಡೂ ರಾಜ್ಯಗಳಿಗೆ ವರದಾನವಾಗಿರುವ ಬೀದರ್​ನ ಮಾಂಜ್ರಾ ನದಿಯ ಒಡಲನ್ನ ಅಕ್ರಮ ಮರುಳು ಧಂದೆ ಕೋರರು ಕೈಹಾಕಿದ್ದಾರೆ. ಮಳೆ ಕೈಕೊಟ್ಟಿದ್ದರಿಂದ ಮಾಂಜ್ರಾ ನದಿ ಬತ್ತಿಹೋಗಿದ್ದು, ಇದನ್ನ ಬಂಡವಾಳ ಮಾಡಿಕೊಂಡು ಅಗಲು ರಾತ್ರಿ ಎನ್ನದೇ ಮರಳನ್ನ ಸಾಗಿಸಲಾಗುತ್ತಿದೆ.

ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆಯ ಹಿಂದೆ ಪೊಲೀಸರು ಕೂಡಾ ಕೈ ಜೋಡಿಸಿದ್ದು, ಯಾರ ಭಯವಿಲ್ಲದೆ ಮರಳನ್ನ ಮಾರಾಟಮಾಡಲಾಗುತ್ತಿದೆ. ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನ ಬಳಸಿ ಮರಳು ಲೂಟಿ ತುಂಬಿಕೊಂಡು ಪೋಲೀಸ್ ಠಾಣೆಯ ಎದುರುಗಡೆಯೇ ವಾಹನಗಳು ಹಾದುಹೋಗುತ್ತಿವೆ. ಆದರೂ ಸಹ ಪೊಲೀಸರು ಕಂಡು ಕಾಣದಂತೆ ಕುಳಿತಿರುವುದು ಹಲವಾರು ಅನುಮಾನಗಳಿ ಎಡೆ ಮಾಡಿಕೊಟ್ಟಿದೆ. ಯಾವುದೇ ಪರವಾನಿಗೆಯನ್ನೇ ಪಡೆಯದೇ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ.

ನದಿಯಲ್ಲಿ ಟ್ಯಾಕ್ಟರ್ ಹಾಗೂ ಟ್ರಕ್​ಗಳನ್ನ ಬಳಸಿಕೊಂಡು ಭಾರೀ ಪ್ರಮಾಣದಲ್ಲಿ ಮರಳನ್ನು ಹೆಕ್ಕಿ ತೆಗೆಯುತ್ತಿದ್ದಾರೆ. ಜೊತೆಗೆ ಕೆಲವೆಡೆ ಹಿಟಾಚಿಗಳನ್ನ ಬಳಸಿಕೊಂಡು ಮರಳು ತೆಗೆದರೆ ಮತ್ತೆ ಕೆಲವೆಡೆ ಕಾರ್ಮಿಕರ ಮೂಲಕ ಮರಳು ತೆಗೆಯಲಾಗ್ತಿದೆ. ಭಾಲ್ಕಿ ತಾಲೂಕಿನ ಚಂದಾಪುರ ಹಾಗೂ ಜನವಾಡ ಪೊಲೀಸ್ ಠಾಣಾ ವ್ಯಾಪ್ತಿ ಯರನಳ್ಳಿ-ಇಸ್ಲಾಂಪುರ ಚಿಮಕೋಡ್, ಚಿಲ್ಲರಗಿ, ಕಂದಗೋಳ, ಗ್ರಾಮದ ಸುತ್ತಮುತ್ತ ಎಗ್ಗಿಲ್ಲದೆ ಮರಳನ್ನು ಅಕ್ರಮವಾಗಿ ಸಾಗಿಸಲಾಗ್ತಿದೆ.

ಸಾವಿರಾರು ಟನ್ ಗಟ್ಟಲೇ ಮಾಂಜ್ರಾ ನದಿಯಿಂದ ಉತ್ತಮ ಗುಣಮಟ್ಟದ ಕಪ್ಪು ಪರಳನ್ನ ರಫ್ತು ಮಾಡಲಾಗ್ತಿದೆ. ಈ ಬಗ್ಗೆ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಾಗಲಿ ಕಣ್ಣೆತ್ತಿನೋಡುತ್ತಿಲ್ಲ. ನೂರಾರು ವಾಹನಗಳು ಹಗಲು ರಾತ್ರಿಯೆನ್ನದೇ ಮರಳು ಸಾಗಾಟ ಮಾಡೋದ್ರಿಂದ ಹಲವು ಗ್ರಾಮಗಳಲ್ಲಿ ಜನರು ರಾತ್ರಿ ನಿದ್ದೆ ಮಾಡಲು ಆಗದಂಥ ಸ್ಥಿತಿ ನಿರ್ಮಾಣವಾಗಿದೆ. ಮರಳು ಗಾರಿಕೆಯಿಂದ ನದಿಗಳ ಅಂತರ್ಜಲ ಬತ್ತಿ ಹೋಗುತ್ತಿದೆ. ಕುಡಿಯಲು ನೀರು ಸಿಗದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೂಡಲೇ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.

Published On - 12:49 pm, Fri, 29 May 20

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು