AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ ಪಂಚಾಯ್ತಿಯಲ್ಲಿ ಇದ್ದು ಇಲ್ಲದಂತಾದ ಸಿಸಿ ಕ್ಯಾಮರಾ: ಕಚೇರಿ ಸಿಬ್ಬಂದಿ ಮೇಲೆಯೇ ಅನುಮಾನ

ಬೆಂಗಳೂರು: ಸರ್ಕಾರಿ ಕಚೇರಿಗಳು ಸೇರಿದಂತೆ ಜಿಲ್ಲಾಡಳಿತ ಭವನದಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಿರಲಿ ಮತ್ತು ಕಚೇರಿಗೆ ಬರುವ ಸಾರ್ವಜನಿಕರ ಮೇಲೆ ನಿಗಾ ವಹಿಸುವುದಕ್ಕೆ ಅಂತಲೆ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಸಿಸಿ ಕ್ಯಾಮರಾಗಳನ್ನ ಅಳವಡಿಸುತ್ತಾರೆ. ಆದ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಬಳಿಯಿರುವ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಭದ್ರತೆಗೆ ಅಂತಾ ಹಾಕಿರುವ ಸಿಸಿ ಕ್ಯಾಮರಾಗಳು ಕಚೇರಿಯ ಸಿಬ್ಬಂದಿ ಮೇಲೆಯೇ ಅನುಮಾನ ಮೂಡಿಸುತ್ತಿದೆ. ಕಚೇರಿಯ ಒಳ ಮತ್ತು ಹೊರ ಭಾಗದಲ್ಲಿ ಅಳವಡಿಸಿರುವ […]

ಜಿಲ್ಲಾ ಪಂಚಾಯ್ತಿಯಲ್ಲಿ ಇದ್ದು ಇಲ್ಲದಂತಾದ ಸಿಸಿ ಕ್ಯಾಮರಾ: ಕಚೇರಿ ಸಿಬ್ಬಂದಿ ಮೇಲೆಯೇ ಅನುಮಾನ
ಪೃಥ್ವಿಶಂಕರ
| Edited By: |

Updated on: Nov 17, 2020 | 5:56 PM

Share

ಬೆಂಗಳೂರು: ಸರ್ಕಾರಿ ಕಚೇರಿಗಳು ಸೇರಿದಂತೆ ಜಿಲ್ಲಾಡಳಿತ ಭವನದಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಿರಲಿ ಮತ್ತು ಕಚೇರಿಗೆ ಬರುವ ಸಾರ್ವಜನಿಕರ ಮೇಲೆ ನಿಗಾ ವಹಿಸುವುದಕ್ಕೆ ಅಂತಲೆ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಸಿಸಿ ಕ್ಯಾಮರಾಗಳನ್ನ ಅಳವಡಿಸುತ್ತಾರೆ.

ಆದ್ರೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಬಳಿಯಿರುವ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಭದ್ರತೆಗೆ ಅಂತಾ ಹಾಕಿರುವ ಸಿಸಿ ಕ್ಯಾಮರಾಗಳು ಕಚೇರಿಯ ಸಿಬ್ಬಂದಿ ಮೇಲೆಯೇ ಅನುಮಾನ ಮೂಡಿಸುತ್ತಿದೆ.

ಕಚೇರಿಯ ಒಳ ಮತ್ತು ಹೊರ ಭಾಗದಲ್ಲಿ ಅಳವಡಿಸಿರುವ ಕ್ಯಾಮರಾಗಳು ಕಚೇರಿಗೆ ಬಂದು ಹೋಗುವ ಸಾರ್ವಜನಿಕರ ಬದಲಿಗೆ ಕಚೇರಿಯ ಗೋಡೆಗಳನ್ನ ನೋಡ್ತಿದ್ದು, ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಕಚೇರಿಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಕೊಠಡಿಗಳ ಬಳಿ ಅಳವಡಿಸಿರುವ ಕ್ಯಾಮರಾಗಳು ಆಗಮನ ಮತ್ತು ನಿರ್ಗಮನದ ದ್ವಾರದ ಬದಲಿಗೆ ಗೋಡೆಗಳನ್ನ ನೋಡುತ್ತಿವೆ.

ಹೀಗಾಗಿ ಕಚೇರಿಯ ಸಿಬ್ಬಂದಿಯೆ ಸಿಸಿಟಿವಿ ಕ್ಯಾಮೆರಾಗಳನ್ನ ತಿರುಗಿಸಿದ್ರಾ ಅನ್ನೋ ಅನುಮಾನವು ಸಾರ್ವಜನಿಕರಲ್ಲಿ ಕಾಡ ತೋಡಗಿದೆ. ಜತೆಗೆ ಕಚೇರಿಯ ಬಳಿ ಕ್ಯಾಮರಾಗಳು ಸರಿಯಾಗಿಲ್ಲ ಅಂತ ಯಾರಾದ್ರು ಏ‌ನಾದ್ರು ಅನಾಹುತಗಳನ್ನ ಮಾಡಿದ್ರೆ ಯಾರು ಹೊಣೆ ಅಂತ ಸಾರ್ವಜನಿಕರು ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ