AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ […]

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 08, 2020 | 11:06 AM

Share

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.

ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ ಜಗಳ ತೆಗೆಯುತ್ತಿದ್ದ.

ಇದರಿಂದ ಬೇಸತ್ತಿದ್ದ ಲತಾಗೆ.. ಈ ಮದ್ಯೆ ಹೂವಿನ ವ್ಯಾಪಾರಿ ಲಕ್ಷ್ಮಣ ಎಂಬಾತನ ಪರಿಚಯವಾಗಿತ್ತು. ಕಾಲ ಕಳೆದಂತೆ, ಸಿದ್ದರಾಜುವಿನ ಕುಡಿತದಿಂದ ರೋಸಿ ಹೋಗಿದ್ದ ಲತಾ, ಗಂಡನನ್ನು ತೊರೆದು ಲಕ್ಷ್ಮಣ ಅಲಿಯಾಸ್ ಲಚ್ಚಿ ಜೊತೆ ವಾಸ ಮಾಡಲು ಪ್ರಾರಂಭಿಸಿದಳು. ಈ ವಿಚಾರ ತಿಳಿದ ಸಿದ್ದರಾಜು ದಿನಾ ಕುಡಿದು ಬಂದು ಲಕ್ಷ್ಮಣನ ಮನೆ ಬಳಿ ಗಲಾಟೆ ಮಾಡುತ್ತಿದ್ದ.

ನಿನ್ನೆ ಇದೇ ವಿಚಾರವಾಗಿ ಲಕ್ಷ್ಮಣ ತನ್ನ ಗೆಳೆಯರನ್ನು ಒಂದು ಕಡೆ ಸೇರಿಸಿಕೊಂಡಿದ್ದ. ಗೆಳೆಯರ ಜೊತೆಗೂಡಿ ಸಿದ್ದರಾಜುನನ್ನು ಆಟೋದಲ್ಲಿ ಕರೆದೊಯ್ದು ಕಂಠಪೂರ್ತಿ ಕುಡಿಸಿ, ರಾತ್ರಿ 9.30ರ ಸುಮಾರಿಗೆ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೊಟೆಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು