AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ […]

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2020 | 11:06 AM

Share

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.

ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ ಜಗಳ ತೆಗೆಯುತ್ತಿದ್ದ.

ಇದರಿಂದ ಬೇಸತ್ತಿದ್ದ ಲತಾಗೆ.. ಈ ಮದ್ಯೆ ಹೂವಿನ ವ್ಯಾಪಾರಿ ಲಕ್ಷ್ಮಣ ಎಂಬಾತನ ಪರಿಚಯವಾಗಿತ್ತು. ಕಾಲ ಕಳೆದಂತೆ, ಸಿದ್ದರಾಜುವಿನ ಕುಡಿತದಿಂದ ರೋಸಿ ಹೋಗಿದ್ದ ಲತಾ, ಗಂಡನನ್ನು ತೊರೆದು ಲಕ್ಷ್ಮಣ ಅಲಿಯಾಸ್ ಲಚ್ಚಿ ಜೊತೆ ವಾಸ ಮಾಡಲು ಪ್ರಾರಂಭಿಸಿದಳು. ಈ ವಿಚಾರ ತಿಳಿದ ಸಿದ್ದರಾಜು ದಿನಾ ಕುಡಿದು ಬಂದು ಲಕ್ಷ್ಮಣನ ಮನೆ ಬಳಿ ಗಲಾಟೆ ಮಾಡುತ್ತಿದ್ದ.

ನಿನ್ನೆ ಇದೇ ವಿಚಾರವಾಗಿ ಲಕ್ಷ್ಮಣ ತನ್ನ ಗೆಳೆಯರನ್ನು ಒಂದು ಕಡೆ ಸೇರಿಸಿಕೊಂಡಿದ್ದ. ಗೆಳೆಯರ ಜೊತೆಗೂಡಿ ಸಿದ್ದರಾಜುನನ್ನು ಆಟೋದಲ್ಲಿ ಕರೆದೊಯ್ದು ಕಂಠಪೂರ್ತಿ ಕುಡಿಸಿ, ರಾತ್ರಿ 9.30ರ ಸುಮಾರಿಗೆ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೊಟೆಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

Follow Us
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ