AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ […]

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Aug 08, 2020 | 11:06 AM

Share

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.

ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ ಜಗಳ ತೆಗೆಯುತ್ತಿದ್ದ.

ಇದರಿಂದ ಬೇಸತ್ತಿದ್ದ ಲತಾಗೆ.. ಈ ಮದ್ಯೆ ಹೂವಿನ ವ್ಯಾಪಾರಿ ಲಕ್ಷ್ಮಣ ಎಂಬಾತನ ಪರಿಚಯವಾಗಿತ್ತು. ಕಾಲ ಕಳೆದಂತೆ, ಸಿದ್ದರಾಜುವಿನ ಕುಡಿತದಿಂದ ರೋಸಿ ಹೋಗಿದ್ದ ಲತಾ, ಗಂಡನನ್ನು ತೊರೆದು ಲಕ್ಷ್ಮಣ ಅಲಿಯಾಸ್ ಲಚ್ಚಿ ಜೊತೆ ವಾಸ ಮಾಡಲು ಪ್ರಾರಂಭಿಸಿದಳು. ಈ ವಿಚಾರ ತಿಳಿದ ಸಿದ್ದರಾಜು ದಿನಾ ಕುಡಿದು ಬಂದು ಲಕ್ಷ್ಮಣನ ಮನೆ ಬಳಿ ಗಲಾಟೆ ಮಾಡುತ್ತಿದ್ದ.

ನಿನ್ನೆ ಇದೇ ವಿಚಾರವಾಗಿ ಲಕ್ಷ್ಮಣ ತನ್ನ ಗೆಳೆಯರನ್ನು ಒಂದು ಕಡೆ ಸೇರಿಸಿಕೊಂಡಿದ್ದ. ಗೆಳೆಯರ ಜೊತೆಗೂಡಿ ಸಿದ್ದರಾಜುನನ್ನು ಆಟೋದಲ್ಲಿ ಕರೆದೊಯ್ದು ಕಂಠಪೂರ್ತಿ ಕುಡಿಸಿ, ರಾತ್ರಿ 9.30ರ ಸುಮಾರಿಗೆ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೊಟೆಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ