ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ […]

ಪತ್ನಿಯ ವಿಚಾರಕ್ಕೆ ಜಗಳ: ಬಾಯ್ ಫ್ರೆಂಡ್ ನಿಂದ ಪತಿಯ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: Aug 08, 2020 | 11:06 AM

ಬೆಂಗಳೂರು: ಹುಡುಗಿ ವಿಚಾರಕ್ಕಾಗಿ ಕಂಠಪೂರ್ತಿ ಕುಡಿಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ.

ಸಿದ್ದರಾಜು ಕೊಲೆಯಾದವ ಎಂದು ತಿಳಿದುಬಂದಿದೆ. ಮೂಲತಃ ಮಳವಳ್ಳಿವನಾಗಿದ್ದ ಸಿದ್ಧರಾಜು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ ಕ್ಲೀನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಆರು ತಿಂಗಳ ಹಿಂದೆ ಲತಾ ಎಂಬಾಕೆಯನ್ನು ಮದುವೆಯಾಗಿದ್ದ ಸಿದ್ದರಾಜು, ಆಕೆಯನ್ನು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕರೆತಂದಿದ್ದ. ಈ ಮಧ್ಯೆ, ಕುಡಿತದ ಚಟಕ್ಕೆ ಬಿದ್ದ ಸಿದ್ದರಾಜು ದಿನಾ ಕುಡಿದು ಬಂದು ಪತ್ನಿಯ ಜೊತೆ ಜಗಳ ತೆಗೆಯುತ್ತಿದ್ದ.

ಇದರಿಂದ ಬೇಸತ್ತಿದ್ದ ಲತಾಗೆ.. ಈ ಮದ್ಯೆ ಹೂವಿನ ವ್ಯಾಪಾರಿ ಲಕ್ಷ್ಮಣ ಎಂಬಾತನ ಪರಿಚಯವಾಗಿತ್ತು. ಕಾಲ ಕಳೆದಂತೆ, ಸಿದ್ದರಾಜುವಿನ ಕುಡಿತದಿಂದ ರೋಸಿ ಹೋಗಿದ್ದ ಲತಾ, ಗಂಡನನ್ನು ತೊರೆದು ಲಕ್ಷ್ಮಣ ಅಲಿಯಾಸ್ ಲಚ್ಚಿ ಜೊತೆ ವಾಸ ಮಾಡಲು ಪ್ರಾರಂಭಿಸಿದಳು. ಈ ವಿಚಾರ ತಿಳಿದ ಸಿದ್ದರಾಜು ದಿನಾ ಕುಡಿದು ಬಂದು ಲಕ್ಷ್ಮಣನ ಮನೆ ಬಳಿ ಗಲಾಟೆ ಮಾಡುತ್ತಿದ್ದ.

ನಿನ್ನೆ ಇದೇ ವಿಚಾರವಾಗಿ ಲಕ್ಷ್ಮಣ ತನ್ನ ಗೆಳೆಯರನ್ನು ಒಂದು ಕಡೆ ಸೇರಿಸಿಕೊಂಡಿದ್ದ. ಗೆಳೆಯರ ಜೊತೆಗೂಡಿ ಸಿದ್ದರಾಜುನನ್ನು ಆಟೋದಲ್ಲಿ ಕರೆದೊಯ್ದು ಕಂಠಪೂರ್ತಿ ಕುಡಿಸಿ, ರಾತ್ರಿ 9.30ರ ಸುಮಾರಿಗೆ ನೆಟ್ಕಲಪ್ಪ ಸರ್ಕಲ್ ಬಳಿಯ ಖಾಸಗಿ ಹೊಟೆಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us