AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೀಕನ ಪತ್ನಿಯ ಕಿರುಕುಳ, ಅವಮಾನ ತಾಳಲಾರದೆ ಮಹಿಳೆ ನೇಣಿಗೆ ಶರಣು

ಬಾಗಲಕೋಟೆ: ತಾನು ಕೆಲಸ ಮಾಡುವ ಯಜಮಾನನ ಪತ್ನಿಯ ಕಿರುಕುಳದಿಂದ ಬೇಸತ್ತ ಮಹಿಳೆ ಕೊಠಡಿಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ. ಸಂಗೀತಾ (23) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಗ್ರಾಮದ ಈರಣ್ಣ ಅಂಗಡಿಯ ಟೇಲರ್‌ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಈ ವೇಳೆ ಈರಣ್ಣ ಅಂಗಡಿಯ ಪತ್ನಿ ಲತಾ, ತನ್ನ ಪತಿ ಹಾಗೂ ಸಂಗೀತಾ ನಡುವೆ ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಪತಿಯೊಂದಿಗೆ ಜಗಳವಾಡುತ್ತಿದ್ದಳು. ತನ್ನ ಪತಿಯೊಂದಿಗೆ ಸಂಗೀತಾ […]

ಮಾಲೀಕನ ಪತ್ನಿಯ ಕಿರುಕುಳ, ಅವಮಾನ ತಾಳಲಾರದೆ ಮಹಿಳೆ ನೇಣಿಗೆ ಶರಣು
ಪೃಥ್ವಿಶಂಕರ
|

Updated on:Nov 20, 2020 | 10:11 AM

Share

ಬಾಗಲಕೋಟೆ: ತಾನು ಕೆಲಸ ಮಾಡುವ ಯಜಮಾನನ ಪತ್ನಿಯ ಕಿರುಕುಳದಿಂದ ಬೇಸತ್ತ ಮಹಿಳೆ ಕೊಠಡಿಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.

ಸಂಗೀತಾ (23) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಗ್ರಾಮದ ಈರಣ್ಣ ಅಂಗಡಿಯ ಟೇಲರ್‌ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಈ ವೇಳೆ ಈರಣ್ಣ ಅಂಗಡಿಯ ಪತ್ನಿ ಲತಾ, ತನ್ನ ಪತಿ ಹಾಗೂ ಸಂಗೀತಾ ನಡುವೆ ಅನೈತಿಕ ಸಂಬಂಧವಿದೆ ಎಂದು ಪದೇ ಪದೇ ಪತಿಯೊಂದಿಗೆ ಜಗಳವಾಡುತ್ತಿದ್ದಳು.

ತನ್ನ ಪತಿಯೊಂದಿಗೆ ಸಂಗೀತಾ ಅನೈತಿಕ ಸಂಬಂಧವಿದೆ ಎಂದು ಸಂಶಯಪಟ್ಟ ಲತಾ, ಸಂಗೀತಾ ನೆಲೆಸಿರುವ ಕೊಠಡಿಯಲ್ಲಿ, ನನ್ನ ಪತಿ ಹಾಗೂ ಲತಾ ಒಟ್ಟಿಗೆ ಇದ್ದಾರೆ ಎಂದು ಭಾವಿಸಿ, ಸಂಗೀತಾ ಇದ್ದ ಕೊಠಡಿಗೆ ಬೀಗ ಹಾಕಿದ್ದಾಳೆ. ಇದರಿಂದ ತೀರ ಅವಮಾನಕ್ಕೊಳಗಾದ ಸಂಗೀತಾ ಅದೇ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಕೊಠಡಿಯೊಳಗೆ ಈರಣ್ಣ ಅಂಗಡಿ ಇರಲಿಲ್ಲ.. ದುರಾದೃಷ್ಟದ ಸಂಗತಿಯೆಂದರೆ ಸಂಗೀತಾಳೊಂದಿಗೆ ಕೊಠಡಿಯೊಳಗೆ ತನ್ನ ಪತಿಯೂ ಇದ್ದಾನೆಂದು ಲತಾ ಅನುಮಾನಗೊಂಡು ಕೊಠಡಿಗೆ ಬೀಗ ಜಡಿದಿದ್ದಳು. ಆದರೆ ಕೊಠಡಿ ತೆರೆದು ನೋಡಿದಾಗ ಸಂಗೀತಾ ಒಬ್ಬಳೆ ಕೊಠಡಿಯಲ್ಲಿದಿದ್ದು ಕಂಡು ಬಂದಿದೆ.

ಮೃತ ಸಂಗೀತಾ ಮೂಲತಃ ಬೀಳಗಿ ತಾಲ್ಲೂಕಿನ ಕೋವಳ್ಳಿ ಗ್ರಾಮದವಳಾಗಿದ್ದು, ಬೆಳಗಾವಿ ಜಿಲ್ಲೆ ರಾಮದುರ್ಗಕ್ಕೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಇತ್ತೀಚೆಗೆ ತನ್ನ ಗಂಡನ ಜೊತೆ ಜಗಳವಾಡಿ ತವರು ಮನೆಗೆ ಬಂದು ನೆಲೆಸಿದ್ದಳು. ಹೀಗಾಗಿ ಗದ್ದನಕೇರಿ ಗ್ರಾಮದ ಈರಣ್ಣ ಅಂಗಡಿ ಟೇಲರ್‌ ಶಾಪ್​ಗೆ ಹೊಲಿಗೆ ಕೆಲಸಕ್ಕೆ ಬರುತ್ತಿದ್ದಳು. ಆದರೆ ಪತಿ ಮೇಲೆ ಸದಾ ಅನುಮಾನ ಪಡುತ್ತಿದ್ದ ಈರಣ್ಣ ಅಂಗಡಿಯ ಪತ್ನಿ ಲತಾಳಿಂದ ಒಂದು ಜೀವ ಬಲಿಯಾಗಿದೆ.

ಇದು ಆತ್ಮಹತ್ಯೆಯಲ್ಲ, ಲತಾ ಹಾಗೂ ಆಕೆಯ ಸಹಚರರು ಸಂಗೀತಾಳನ್ನು ಕೊಲೆ ಮಾಡಿದ್ದಾರೆ ಎಂದು ಮೃತಳ ಮನೆಯವರ ಆರೋಪ ಮಾಡುತ್ತಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಲತಾ ಹಾಗೂ ಆಕೆಯ ಜೊತೆಗಿದ್ದ ಇಬ್ಬರು ಯುವಕರನ್ನು ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಹಣಕಾಸು ವಹಿವಾಟು, ಅಕ್ರಮ ಸಂಬಂಧ ಶಂಕೆ: ಮಹಿಳೆಯ ಕೊಲೆಗೈದು ಅವಿವಾಹಿತ ಆತ್ಮಹತ್ಯೆ

Published On - 7:23 am, Fri, 20 November 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!