AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ

ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
ಆಯೇಷಾ ಬಾನು
|

Updated on:Mar 18, 2021 | 2:04 PM

Share

ಬೆಂಗಳೂರು: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಅನಿಸಿಕೆ ಹೊರ ಹಾಕಿದ್ದಾರೆ. ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಸ್ಪರ್ಧಿಸಬೇಕೆ ಎಂದು ಒಂದು ಕಡೆ ಸಿದ್ದರಾಮಯ್ಯ ಪ್ರಯತ್ನ ಪಟ್ರೆ ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರಿಂದಲೂ ಒತ್ತಡ ಹೆಚ್ಚಾಗುತ್ತಿತ್ತು. ಅಲ್ಲದೆ ಸತೀಶ್ ಜಾರಕಿಹೊಳಿಯನ್ನು ಕಣಕ್ಕಿಳಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಸೂಚನೆ ಬಂದಿತ್ತು. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಮಾತ್ರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಸದ್ಯ ಈಗ ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ತಾವು ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದಿದ್ದಾರೆ.

ಸತೀಶ್ ಕಣಕ್ಕಿಳಿದರೆ ಸಹೋದರರಿಂದಲೇ ಪರೋಕ್ಷವಾಗಿ ಸಹಾಯ ಸಿಗಬಹುದೆಂದು ‘ಕೈ’ ಲೆಕ್ಕಾಚಾರ ಹಾಕಿಕೊಂಡಿದೆ. ಜೊತೆಗೆ ಲಿಂಗಾಯತ ಸಮುದಾಯದ ಹೊರತಾಗಿ ಅಹಿಂದ ಮತಗಳು ಕ್ರೋಡೀಕರಣವಾಗುತ್ತೆಂಬ ಲೆಕ್ಕಾಚಾರವಿದೆ. ಸಂಪನ್ಮೂಲ ಕ್ರೋಡೀಕರಣದಲ್ಲೂ ಸತೀಶ್ ಎತ್ತಿದ ಕೈ ಎಂಬುವುದು ಕೈ ನಾಯಕರ ನಿಲುವು. ಸತೀಶ್ ಜಾರಕಿಹೊಳಿಗಿಂತ ಬೇರೆ ಉತ್ತಮ ಅಭ್ಯರ್ಥಿ ಇಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿತ್ತು.

ಇದನ್ನೂ ಓದಿ: ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

Published On - 1:18 pm, Thu, 18 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ