ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ

ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ವರಿಷ್ಠರು ಸೂಚಿಸಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಿದ್ಧ -ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
ಆಯೇಷಾ ಬಾನು

Updated on: Mar 18, 2021 | 2:04 PM

ಬೆಂಗಳೂರು: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಅನಿಸಿಕೆ ಹೊರ ಹಾಕಿದ್ದಾರೆ. ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಸ್ಪರ್ಧಿಸಬೇಕೆ ಎಂದು ಒಂದು ಕಡೆ ಸಿದ್ದರಾಮಯ್ಯ ಪ್ರಯತ್ನ ಪಟ್ರೆ ಮತ್ತೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರಿಂದಲೂ ಒತ್ತಡ ಹೆಚ್ಚಾಗುತ್ತಿತ್ತು. ಅಲ್ಲದೆ ಸತೀಶ್ ಜಾರಕಿಹೊಳಿಯನ್ನು ಕಣಕ್ಕಿಳಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಸೂಚನೆ ಬಂದಿತ್ತು. ಆದರೆ ಈ ಬಗ್ಗೆ ಸತೀಶ್ ಜಾರಕಿಹೊಳಿ ಮಾತ್ರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಸದ್ಯ ಈಗ ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ತಾವು ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದಿದ್ದಾರೆ.

ಸತೀಶ್ ಕಣಕ್ಕಿಳಿದರೆ ಸಹೋದರರಿಂದಲೇ ಪರೋಕ್ಷವಾಗಿ ಸಹಾಯ ಸಿಗಬಹುದೆಂದು ‘ಕೈ’ ಲೆಕ್ಕಾಚಾರ ಹಾಕಿಕೊಂಡಿದೆ. ಜೊತೆಗೆ ಲಿಂಗಾಯತ ಸಮುದಾಯದ ಹೊರತಾಗಿ ಅಹಿಂದ ಮತಗಳು ಕ್ರೋಡೀಕರಣವಾಗುತ್ತೆಂಬ ಲೆಕ್ಕಾಚಾರವಿದೆ. ಸಂಪನ್ಮೂಲ ಕ್ರೋಡೀಕರಣದಲ್ಲೂ ಸತೀಶ್ ಎತ್ತಿದ ಕೈ ಎಂಬುವುದು ಕೈ ನಾಯಕರ ನಿಲುವು. ಸತೀಶ್ ಜಾರಕಿಹೊಳಿಗಿಂತ ಬೇರೆ ಉತ್ತಮ ಅಭ್ಯರ್ಥಿ ಇಲ್ಲ. ಹೀಗಾಗಿ ಸತೀಶ್ ಜಾರಕಿಹೊಳಿ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿತ್ತು.

ಇದನ್ನೂ ಓದಿ: ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

Published On - 1:18 pm, Thu, 18 March 21

Loading...
Unable to load recommendations.
Follow Us