AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಮ್ಮಾವು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಎಲೆಕ್ಷನ್ ಬಹಿಷ್ಕಾರ

ನಾಮಪತ್ರ ಸಲ್ಲಿಸಲು ಇಮ್ಮಾವು ಗ್ರಾಮಸ್ಥರು ಮುಂದಾಗಲ್ಲಿಲ್ಲ. ನಾಮಪತ್ರ ಸಲ್ಲಿಸುವಂತೆ ತಾಲೂಕು ಆಡಳಿತ ಹಾಗೂ ಪೊಲೀಸರು ಮನವಿ ಮಾಡಿ ಮನ ಒಲಿಸಲು ಯತ್ನಿಸಿದರು. ತಾಲೂಕು ಆಡಳಿತ ಹಾಗೂ ಚುನಾವಣಾಧಿಕಾರಿಗಳ ಸಂದಾನ ವಿಫಲಗೊಂಡಿದೆ.

ಇಮ್ಮಾವು ಗ್ರಾಮಸ್ಥರಿಂದ ಗ್ರಾಮ ಪಂಚಾಯತಿ ಎಲೆಕ್ಷನ್ ಬಹಿಷ್ಕಾರ
ಇಮ್ಮಾವು ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ
shruti hegde
|

Updated on:Dec 17, 2020 | 9:51 AM

Share

ಮೈಸೂರು:  ಏಷಿಯನ್ ಪೈಂಟ್ಸ್ ಕಾರ್ಖಾನೆಯಲ್ಲಿ ಉದ್ಯೋಗ ಭರವಸೆ ನೀಡದ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಮ್ಮಾವು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಬುಧವಾರ ಅಂದರೆ ನಿನ್ನೆ, ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿತ್ತು. ಗ್ರಾಮಸ್ಥರು ನಾಮಪತ್ರ ಸಲ್ಲಿಸಲು ಮುಂದಾಗಲ್ಲಿಲ್ಲ. ನಾಮಪತ್ರ ಸಲ್ಲಿಸುವಂತೆ ತಾಲೂಕು ಆಡಳಿತ ಹಾಗೂ ಪೊಲೀಸರು ಮನವಿ ಮಾಡಿ ಮನ ಒಲಿಸಲು ಯತ್ನಿಸಿದರು. ತಾಲೂಕು ಆಡಳಿತ ಹಾಗೂ ಚುನಾವಣಾಧಿಕಾರಿಗಳ ಸಂದಾನ ವಿಫಲಗೊಂಡಿದೆ. ಈ ವೇಳೆ ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಇಮ್ಮಾವು ಗ್ರಾಮದ ಜನರು ಕಳೆದ 23 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರು. ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು.

ಇಮ್ಮಾವು ಗ್ರಾಮ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದೆ. ಇದುವರೆಗೂ 16 ವಾರ್ಡ್​ಗಳ ಪೈಕಿ 13 ವಾರ್ಡ್​ಗಳಿಗೆ ಮಾತ್ರ ನಾಮಪತ್ರ ಸಲ್ಲಿಕೆಯಾಗಿದೆ. ಇಮ್ಮಾವು ಗ್ರಾಮದ 3 ವಾರ್ಡ್​ಗಳಿಗೆ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಜಿಲ್ಲಾಡಳಿತದ ಮನವಿ ಮಾಡಿದರೂ ಗ್ರಾಮಸ್ಥರು ಮನವಿಯನ್ನು ಒಪ್ಪಲಿಲ್ಲ.

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ.. ಯಾಕೆ?

Published On - 9:49 am, Thu, 17 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ