AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಪುಟ್ಟ ಎಲೆ, ಆರೋಗ್ಯಕ್ಕೆ ದೊಡ್ಡಮಟ್ಟದ ಅನುಕೂಲವಿದೆ! ಯಾವುದು ಗೊತ್ತಾ?

ಕೊರೊನಾ ವೈರಸ್ ರೋಗದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಒಂದೆಲಗ ಸಸ್ಯದಿಂದ ಕೊರೊನಾ ವೈರಸ್ ಲಕ್ಷಣಗಳನ್ನು ತಡೆಹಿಡಿಯುವ ಮಾರ್ಗ ಕೈಗೊಳ್ಳಬಹುದು.

ನೋಡಲು ಪುಟ್ಟ ಎಲೆ, ಆರೋಗ್ಯಕ್ಕೆ ದೊಡ್ಡಮಟ್ಟದ ಅನುಕೂಲವಿದೆ! ಯಾವುದು ಗೊತ್ತಾ?
ಹಚ್ಚ ಹಸಿರಿನ ಒಂದೆಲಗ
shruti hegde
| Edited By: |

Updated on:Nov 28, 2020 | 12:36 PM

Share

ಹಳ್ಳಿಗಳಲ್ಲಿ ಜನರು ಅನಾರೋಗ್ಯ ಉಂಟಾದಾಗ ಆಸ್ಪತ್ರೆಗೆ ಹೋಗುವುದು ತುಂಬಾ ಕಡಿಮೆ. ಮನೆಯಲ್ಲಿಯೇ ಸಿಗುವಂತಹ ಆಯುರ್ವೇದ ಗಿಡಮೂಲಿಕೆಗಳನ್ನು ಬಳಸಿ ಔಷಧ ತಯಾರಿಸುತ್ತಾರೆ. ಈ ಮಧ್ಯೆ, ಕೊರೊನಾ ವೈರಸ್ ರೋಗದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ ಒಂದೆಲಗ ಸಸ್ಯದಿಂದ ಕೊರೊನಾ ವೈರಸ್ ಲಕ್ಷಣಗಳನ್ನು ತಡೆಹಿಡಿಯುವ ಮಾರ್ಗ ಕಂಡುಕೊಳ್ಳೂವತ್ತ ಗಮನಹರಿಸಬಹುದು.

ಈ ಸಸ್ಯದ ಹುಟ್ಟು: ಒಂದೆಲಗದ ಹುಟ್ಟು ಏಷ್ಯಾದಲ್ಲಿಯೇ ಇದೆ. ಸುಶ್ರುತ ಸಂಹಿತೆಯಲ್ಲಿ ಈ ಎಲೆಯ ಕುರಿತು ಹೇಳಿದ್ದಾರೆ. ಬ್ರಾಹ್ಮಿ ಔಷಧವಾಗಿ ಈ ಸಸ್ಯದ ಎಲೆಯನ್ನು ಬಳಸುತ್ತಾರೆ. ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಜನ ಇದರ ಉಪಯೋಗ ಪಡೆಯುತ್ತಿದ್ದಾರೆ.

ನೋಡಲು ಹೇಗಿರುತ್ತೆ? ಹಸಿರು ಮೈಬಣ್ಣ ಹೊಂದಿದೆ ಈ ಸಸ್ಯ. ಒಂದು ಕಾಂಡಕ್ಕೆ ಒಂದೇ ಎಲೆಯನ್ನು ಹೊಂದಿರುತ್ತದೆ. ಆದ್ದರಿಂದ ಒಂದೆಲಗ ಎಂಬ ಹೆಸರು ಬಂದಿದೆ. ದಟ್ಟವಾಗಿ ಬೆಳೆಯುತ್ತದೆ. ಹಳ್ಳಿಗಳಲ್ಲಿ ಹೆಚ್ಚು ಕಂಡುಬರುವುದು.

ಎಲ್ಲಿ ಹೆಚ್ಚಾಗಿ ಕಂಡುಬರುವುದು? ಕರಾವಳಿ, ಮಲೆನಾಡು ಪ್ರದೇಶದಲ್ಲಿ ಗದ್ದೆ, ತೋಟಗಳು ಕಂಡುಬರುವುದು ಹೆಚ್ಚು. ಈ ಸಸ್ಯಕ್ಕೆ ಹೆಚ್ಚು ನೀರಿನ ಅವಶ್ಯಕತೆ ಇದೆ. ಮಣ್ಣಿನ ಫಲವತ್ತತೆ ಅಧಿಕವಿರುವ ಪ್ರದೇಶಗಳಲ್ಲಿ ಈ ಸಸ್ಯ ಕಂಡುಬರುತ್ತದೆ. ಈ ಸಸ್ಯದ ಕಾಂಡ ಹೆಚ್ಚು ನೀರನ್ನು ಹೀರಿಕೊಳ್ಳುತ್ತದೆ. ನೀರಿನ ಗುಣಮಟ್ಟ ಹೆಚ್ಚಿರುವ ಪ್ರದೇಶದಲ್ಲಿ ಸೊಂಪಾಗಿ ಬೆಳೆಯುತ್ತದೆ.

ಪ್ರಯೋಜನಗಳೇನು? ಅನೇಕ ಆರೋಗ್ಯ ಸಮಸ್ಯೆಗಳ ನಿವಾರಣೆ: ಈ ಸಸ್ಯದ ಎಲೆಗಳಿಂದ ತಯಾರಿಸಿದ ಕಷಾಯವನ್ನು ಸೇವಿಸುವುದರಿಂದ ಕೆಮ್ಮು, ಶೀತ, ಜ್ವರದಂತಹ ರೋಗಗಳಿಂದ ಪರಿಹಾರವಿದೆ. ಕೊರೊನಾ ಸಂಸರ್ಭದಲ್ಲಿ ವಾರಕ್ಕೆ ಮೂರು ಬಾರಿ ಈ ಎಲೆಗಳಿಂದ ತಯಾರಿಸಿದ ಕಷಾಯವನ್ನು ಜನರು ಸೇವಿಸುವುದರ ಮೂಲಕ ಕೊರೊನಾ ಲಕ್ಷಣಗಳನ್ನು ತಡೆಯಬಹುದು. ಹಳ್ಳಿಗಳಲ್ಲಿ ಈ ಎಲೆಗಳ ತಂಬುಳಿ ಮಾಡಿ ಜನರು ಸೇವಿಸುತ್ತಾರೆ. ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಔಷಧವಿದು.

ಏಕಾಗ್ರತೆಯ ಜೊತೆಗೆ ನೆನಪಿನ ಶಕ್ತಿ ಹೆಚ್ಚುತ್ತದೆ: ಪ್ರತಿ ದಿನವೂ ಬೆಳಿಗ್ಗೆ ಎದ್ದ ತಕ್ಷಣ 4-5 ಎಲೆಗಳನ್ನು ಸೇವಿಸುವುದರಿಂದ ಏಕಾಗ್ರತೆ ಹೆಚ್ಚುತ್ತದೆ. ಓದುವ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಒಂದೆಲಗ ಎಲೆಯನ್ನು ದಿನವೂ ಕೊಡುವ ಹವ್ಯಾಸ ಒಳ್ಳೆಯದು. ಚಿಕ್ಕಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಈ ಎಲೆ ಹೆಚ್ಚು ಉಪಯುಕ್ತವಾಗಿದೆ.

Published On - 12:35 pm, Sat, 28 November 20

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ